Connect with us

Dvgsuddi Kannada | online news portal | Kannada news online

ದಾವಣಗೆರೆ: ಬೀರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಗೆ ಬಂದಿದ್ದ ಮಹಿಳೆಯ 4 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

gold

ದಾವಣಗೆರೆ

ದಾವಣಗೆರೆ: ಬೀರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಗೆ ಬಂದಿದ್ದ ಮಹಿಳೆಯ 4 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ದಾವಣಗೆರೆ: ನಗರದ ದೇವರಾಜ ಅರಸ್ ಬಡಾವಣೆಯ ಬೀರಲಿಂಗೇಶ್ವರ ಕಲ್ಯಾಣ ಮಂಟಪಕ್ಕೆ ಮದುವೆಗೆ ಬಂದಿದ್ದ ಮಹಿಳೆಯ 4 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕರೂರಿನ ವಿದ್ಯಾ ಎಂಬುವರ ಆಭರಣ ಕಳವಾಗಿವೆ. ಸಂಬಂಧಿಕರ ಮದುವೆಗೆ ಮೇ 15 ರಂದು ಕಲ್ಯಾಣ ಮಂಟಪಕ್ಕೆ ಬಂದಿದ್ದರು. ಊಟ ಮಾಡಲು ಹೋಗುವಾಗ ಉಳಿದು ಕೊಂಡಿದ್ದ ಕೊಠಡಿಯಲ್ಲಿ ಬ್ಯಾಗ್ ನಲ್ಲಿ ಚಿನ್ನಾಭರಣ ಇಟ್ಟು ಬೀಗ ಹಾಕಿಕೊಂಡು ಹೋಗಿದ್ದರು.

ಊಟವಾಗ ಬಳಿಕ ರೂಮ್ ಗೆ ಬಂದಾಗ ಬೀಗ ಓಪನ್ ಆಗಿದೆ. ತಕ್ಷಣ ರೂಮ್ ಒಳಗೆ ಹೋಗಿ ಬ್ಯಾಗ್ ನೋಡಿದ್ದಾಗ ಚಿನ್ನಾಭರಣ ಕಳವಾಗಿದೆ. 25 ಗ್ರಾಂ ನೆಕ್ಲೇಸ್,10 ಗ್ರಾಂ ಜುಮುಕಿ,10 ಗ್ರಾಂ ಕಿವಿ ಸುತ್ತು ಕಳವಾಗಿದೆ. ಈ ಬಗ್ಗೆ ಬಸವ‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top