Connect with us

Dvgsuddi Kannada | online news portal | Kannada news online

ದಾವಣಗೆರೆ: ಜೈನ್ ಮಂದಿರಲ್ಲಿ 3.55ಲಕ್ಷ ಮೌಲ್ಯದ ಬೆಳ್ಳಿ ಕಿರೀಟ, ಚಿನ್ನಾಭರಣ ಕಳ್ಳತನ

ದಾವಣಗೆರೆ

ದಾವಣಗೆರೆ: ಜೈನ್ ಮಂದಿರಲ್ಲಿ 3.55ಲಕ್ಷ ಮೌಲ್ಯದ ಬೆಳ್ಳಿ ಕಿರೀಟ, ಚಿನ್ನಾಭರಣ ಕಳ್ಳತನ

ದಾವಣಗೆರೆ: ನಗರದ ಕೆಆರ್ ರಸ್ತೆಯ ಬಿ.ಟಿ. ಗಲ್ಲಿಯ ರಾಜ್ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನ ಪಾಶ್ವನಾಥ್ ಜೈನ ಮಂದಿರದಲ್ಲಿ 3.55 ಲಕ್ಷ ಮೌಲ್ಯದ ಬೆಳ್ಳಿ ಕಿರೀಟ, ಚಿನ್ನಾಭರಣ ಕಳ್ಳತನವಾಗಿದೆ. ಮೇ. 12 ರಂದು ತಡ ರಾತ್ರಿ ಈ ಘಟನೆ‌‌ ನಡೆದಿದೆ. ಬೆಳಗ್ಗೆ ಕಳ್ಳತನವಾಗಿರುವುದು ಗೊತ್ತಾಗಿದೆ. ಅಪಾರ್ಟ್ ಮೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಇದ್ದರೂ ಈ ಘಟನೆ‌ ನಡೆದಿದೆ.

80 ಸಾವಿರ ಮೌಲ್ಯದ ಬೆಳ್ಳಿ ಕಿರೀಟ, 1.50 ಲಕ್ಷದ ಬಂಗಾರದ ಟೀಕಾ, 50 ಸಾವಿರ ಮೌಲ್ಯದ ಬಂಗಾರದ ಕೊರಳ ಪಟ್ಟಿ, 75 ಸಾವಿರ ಮೌಲ್ಯದ ಬಂಗಾರದ ಹಣೆ ಪಟ್ಟಿ ಸೇರಿ ಒಟ್ಟು 3.55 ಲಕ್ಷದ ಚಿನ್ನಾಭರಣ ಕಳ್ಳತನವಾಗಿವೆ. ಈ ಬಗ್ಗೆ ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top