Connect with us

Dvgsuddi Kannada | online news portal | Kannada news online

ದಾವಣಗೆರೆ: ಗಣೇಶ ಹಬ್ಬದ ಹಣ ವಸೂಲಿ ನೆಪದಲ್ಲಿ ಹಲ್ಲೆ ನಡೆಸಿದ ಓರ್ವ ಆರೋಪಿ ಬಂಧನ

ದಾವಣಗೆರೆ

ದಾವಣಗೆರೆ: ಗಣೇಶ ಹಬ್ಬದ ಹಣ ವಸೂಲಿ ನೆಪದಲ್ಲಿ ಹಲ್ಲೆ ನಡೆಸಿದ ಓರ್ವ ಆರೋಪಿ ಬಂಧನ

ದಾವಣಗೆರೆ: ಗಣೇಶ ಹಬ್ಬದ ಹಣ ವಸೂಲಿ ನೆಪದಲ್ಲಿ ಹಲ್ಲೆ ನಡೆಸಿದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ರಾತ್ರಿ (ಆ.29) ರಾತ್ರಿ ೦8-೦೦ ಗಂಟೆ ಸಮಯದಲ್ಲಿ ದಾವಣಗೆರೆಯ ಬೂದಾಳ್ ರಸ್ತೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಹಣ ವಸೂಲಿ ನೆಪದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಿದ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆ ಕೈಗೊಂಡು ಘಟನೆಯ ಸಂಬಂಧ ಒಬ್ಬ ಆರೋಪಿತನನ್ನು ದಸ್ತಗಿರಿ ಮಾಡಿದ್ದು, ಉಳಿದ ಆರೋಪಿತರು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಪತ್ತೆ ಕಾರ್ಯ ಮುಂದುವರೆದಿರುತ್ತದೆ. ಯಾರೇ ‘ಗಣೇಶ ಹಬ್ಬದ’ ಪ್ರಯುಕ್ತ ಹಣ ವಸೂಲಿ ಮಾಡಿದ್ದಲ್ಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಇದರ ಬಗ್ಗೆ ಮಾಹಿತಿ ಇದ್ದರೆ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಪೊಲೀಸರಿಗೆ ತಿಳಿಸಲು ಈ ಮೂಲಕ ತಿಳಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top