ದಾವಣಗೆರೆ: ರಾಜ್ಯದಲ್ಲಿಯೇ ಅತಿ ದೊಡ್ಡ ಆನ್ ಲೈನ್ ವಂಚನೆ ಪ್ರಕರಣವನ್ನು ಜಿಲ್ಲಾ ಪೊಲೀಸರು ಪತ್ತೆ ಮಾಡಿದ್ದಾರೆ. ಸುಮಾರು 1 ಸಾವಿರ ಕೋಟಿ ವಂಚನೆ ಕೇಸ್ ನಲ್ಲಿ ದೂರು ಕೊಟ್ಟವನೇ ಪ್ರಮುಖ ಆರೋಪಿ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಈ ಪ್ರಕರಣದ ಬಹು ಕೋಟಿ ವಂಚವೆ ಪ್ರಕರಣವಾಗಿದ್ದು, ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಈ ಕೇಸ್ ಅನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ.
ಕಾಂಗ್ರೆಸ್ ನಾಯಕತ್ವ ಬದಲಾವಣೆ: ಸಂಕ್ರಾಂತಿ ನಂತರ ಸೂರ್ಯಪಥ ಬದಲಾವಣೆ.. ಚನ್ನಗಿರಿ ಶಾಸಕ ಮತ್ತೊಮ್ಮೆ ಸ್ಫೋಟಕ ಹೇಳಿಕೆ
ಜಿಲ್ಲಾ ಪೊಲೀಸರು ಬಯಲಿಗೆಳೆದಿದ್ದ ಸೈಬರ್ ವಂಚನೆ ಪ್ರಕರಣವೊಂದು ಇದೀಗ ರಾಜ್ಯದಲ್ಲೇ ಅತಿದೊಡ್ಡ ಸೈಬರ್ ಅಪರಾಧ (Cyber Crime) ಪ್ರಕರಣಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಆರಂಭದಲ್ಲಿ ಕೇವಲ 150 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದ್ದ ಈ ಪ್ರಕರಣದಲ್ಲಿ, ಇದೀಗ 1,000 ಕೋಟಿ ರೂಪಾಯಿಗೂ ಅಧಿಕ ಹಣ ವಹಿವಾಟು ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಈ ಪ್ರಕರಣ ಪತ್ತೆಯಾಗಿದ್ದು ಹೇಗೆ..?
ಎರಡು ತಿಂಗಳ ಹಿಂದೆ ದಾವಣಗೆರೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಮೋದ್ ಎಂಬ ವ್ಯಕ್ತಿ ನನ್ನ ಖಾತೆಯಿಂದ ಆನ್ ಲೈನ್ ವಂಚನೆ ನಡೆದಿದೆ ಎಂದು ದೂರು ದಾಖಲಿಸಿದ್ದರು. ಕನ್ಸ್ಟ್ರಕ್ಷನ್ ಉದ್ಯಮ ನಡೆಸುತ್ತಿದ್ದ ಪ್ರಮೋದ್, ತನ್ನ ಬ್ಯಾಂಕ್ ಖಾತೆಯಿಂದ 52 ಲಕ್ಷ ರೂಪಾಯಿಗಳ ಹಣ ಆನ್ ಲೈನ್ ವಂಚನೆ ನಡೆದಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು, ಪ್ರಮೋದ್ ಖಾತೆಯಿಂದಲೇ 150 ಕೋಟಿ ರೂಪಾಯಿ ವರ್ಗಾವಣೆ ಆಗಿರುವುದು ಪತ್ತೆಹಚ್ಚಿದರು.
ಕಂದಾಯ ಜಾಮೀನಿನ ನಿವೇಶದಲ್ಲಿ ಮನೆ ಕಟ್ಟಿಕೊಂಡಿದ್ರೆ ಹಕ್ಕುಪತ್ರ ನೀಡಿ, ಖಾತಾ ಒದಗಿಸಲು ಕ್ರಮ; ಸಚಿವ ಪ್ರಿಯಾಂಕ್ ಖರ್ಗೆ
ದೂರು ಕೊಟ್ಟವನೇ ಆರೋಪಿ
ಆರಂಭದಲ್ಲಿ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದ ಪ್ರಮೋದ್, ತನಿಖೆ ಮುಂದುವರಿದಂತೆ ಪ್ರಕರಣದ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟರು. ಪೊಲೀಸರು ಆತನನ್ನು ತೀವ್ರವಾಗಿ ವಿಚಾರಣೆ ನಡೆಸಿದಾಗ, ಆತನ ಖಾತೆಗೆ ಜಮೆಯಾಗಿದ್ದ ಹಣವೇ ಅನಾಮಧೇಯ ಮೂಲಗಳಿಂದ ಬಂದಿರುವುದು ಬೆಳಕಿಗೆ ಬಂದಿದೆ.
ಕರೆಂಟ್ ಅಕೌಂಟ್ ಮಾರಾಟ ದಂಧೆ
ತನಿಖೆ ವೇಳೆ ಯಾವುದೇ ಉದ್ಯಮ ಇಲ್ಲದಿದ್ದರೂ ಕರೆಂಟ್ ಅಕೌಂಟ್ ತೆರೆದು, ಅದನ್ನು ಬೇರೆಯವರಿಗೆ ಮಾರಾಟ ಮಾಡುತ್ತಿರುವ ದೊಡ್ಡ ಜಾಲ ಬಯಲಾಗಿದೆ. ದುಬೈ ಸೇರಿದಂತೆ ವಿದೇಶಗಳಿಂದ ಕೋಟಿ ಕೋಟಿ ರೂಪಾಯಿ ಹಣ ಈ ಕರೆಂಟ್ ಅಕೌಂಟ್ಗಳಿಗೆ ಜಮೆಯಾಗುತ್ತಿತ್ತು. ಆನ್ಲೈನ್ ಗೇಮಿಂಗ್, ಗ್ಯಾಂಬ್ಲಿಂಗ್, ಫೇಕ್ ಟ್ರೇಡಿಂಗ್ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಿಂದ ಈ ಹಣ ಹರಿದುಬರುತ್ತಿದ್ದ ಮಾಹಿತಿ ಸಿಕ್ಕಿದೆ.
ಆರೋಪಿ ಪ್ರಮೋದ್ ತನ್ನ ಕರೆಂಟ್ ಅಕೌಂಟ್ ಅನ್ನು ಇತರರಿಗೆ ಬಳಕೆಗೆ ನೀಡಿದ್ದು, ಅದಕ್ಕಾಗಿ ಕಮಿಷನ್ ಪಡೆಯುತ್ತಿದ್ದ ಎನ್ನಲಾಗಿದೆ. ಆದರೆ ಜಮೆಯಾದ ಹಣಕ್ಕೆ ಕಮಿಷನ್ ನೀಡಿಲ್ಲ ಎಂದು ಆರೋಪಿಸಿ, ವಂಚಕರು ತನ್ನ ಖಾತೆಯಲ್ಲಿದ್ದ ಹಣ ಕದ್ದಿದ್ದಾರೆ ಎಂದು ಪ್ರಮೋದ್ ದೂರು ನೀಡಿದ್ದು ತನಿಖೆಯಲ್ಲಿ ಗೊತ್ತಾಗಿದೆ.
ದಾವಣಗೆರೆ: ಮಹಿಳಾ ಸ್ವ ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ
ಪ್ರಕರಣದಲ್ಲಿ ಅಂತರ್ ರಾಜ್ಯ ಲಿಂಕ್
ಪ್ರಕರಣ ಸಂಬಂಧ ಹಾಸನ ಜಿಲ್ಲೆಯ ಬೇಲೂರು ಮೂಲದ ಅರ್ಫಾತ್ ಪಾಷಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅರ್ಫಾತ್ ಖಾತೆಯಲ್ಲಿ ಇದ್ದ 18 ಕೋಟಿ ರೂಪಾಯಿಯನ್ನು ಪೊಲೀಸರು ಮುಟ್ಟುಗೋಲ ಹಾಕಿಕೊಂಡಿದ್ದಾರೆ. ಅರ್ಫಾತ್ ಕಳೆದ ಎರಡು ತಿಂಗಳಲ್ಲಿ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ 132 ಕೋಟಿ ರೂಪಾಯಿ ಹಣ ವಿತ್ಡ್ರಾ ಮಾಡಿಕೊಂಡಿದ್ದ ಎಂಬ ಅಚ್ಚರಿಯ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಅರ್ಫಾತ್ ನೀಡಿದ ಮಾಹಿತಿಯ ಮೇರೆಗೆ ಗುಜರಾತ್ನ ಅಹಮದಾಬಾದ್ ಮೂಲದ ಸಂಜಯ್ ಕುಂದ್ ಎಂಬಾತನನ್ನು ಕೂಡ ಬಂಧಿಸಲಾಗಿದೆ.
1 ಸಾವಿರ ಕೋಟಿ ಅಕ್ರಮ ವಹಿವಾಟು ಸಿಐಡಿಗೆ ವರ್ಗಾವಣೆ
ತನಿಖೆ ಮುಂದುವರಿದಂತೆ ಈ ಜಾಲದ ವಂಚನೆ ಪ್ರಕರಣಗಳು ರಾಜ್ಯಾದ್ಯಂತ ವಿಸ್ತರಿಸಿರುವುದು ಕಂಡುಬಂದಿದೆ. ಒಟ್ಟು ವಹಿವಾಟು ಮೊತ್ತ 1,000 ಕೋಟಿ ರೂಪಾಯಿಗೂ ಅಧಿಕವಾಗಿದೆ. ಪ್ರಕರಣದ ವ್ಯಾಪ್ತಿ ಹಲವು ರಾಜ್ಯಗಳಿಗೆ ವಿಸ್ತರಿಸಿರುವ ಹಿನ್ನೆಲೆ, ಹೆಚ್ಚಿನ ತನಿಖೆಗಾಗಿ ಈ ಕೇಸ್ ಅನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಐಡಿ ತನಿಖೆಯಿಂದ ಇನ್ನಷ್ಟು ಅಕ್ರಮ ಹಣ ಪತ್ತೆಯಾಗುವ ಸಾಧ್ಯತೆ ಇದೆ.



