ದಾವಣಗೆರೆ: ಬ್ಯಾಂಕ್ ಖಾತೆ ತೆರೆದು ಸೈಬರ್ ವಂಚನೆಗೆ ಸಹಕಾರ ; ಇಬ್ಬರು ಆರೋಪಿಗಳ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ವಿವಿಧ ಬ್ಯಾಂಕ್ ಗಳಲ್ಲಿ ಸುಳ್ಳು ಮಾಹಿತಿಯನ್ನು ನೀಡಿ ಮ್ಯೂಲ್ ಖಾತೆಗಳನ್ನು ತೆರೆದು ಸೈಬರ್ ವಂಚನೆಗಳಿಗೆ ಸಹಕರಿಸಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಖಾತೆಗಳನ್ನು ಪರಿಶೀಲಿಸಿದಾಗ ಸುಳ್ಳು‌ ಮಾಹಿತಿ ನೀಡಿ ಬ್ಯಾಂಕ್ ಖಾತೆ ತೆರೆದು ಸೈಬರ್ ಸಹಕಾರ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧನ ಮಾಡಿದ್ದಾರೆ.

ದಾವಣಗೆರೆ: ಅಡಿಕೆ ತೋಟದ ತಂತಿಬೇಲಿಗೆ ಸಿಲುಕಿ ಚಿರತೆ ಸಾವು

ಈ ಖಾತೆಗಳ ಮೇಲೆ ಕರ್ನಾಟಕ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ 37 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿರುವುದು ಕಂಡು ಬಂದಿದೆ. ಬ್ಯಾಂಕ್ ಗಳಲ್ಲಿ ಸುಳ್ಳು ಮಾಹಿತಿಯನ್ನು ನೀಡಿ ಮ್ಯೂಲ್ ಖಾತೆಗಳನ್ನು ತೆರೆದು ಸಾರ್ವಜನಿಕರಿಗೆ ವಂಚಿಸುವ ಉದ್ದೇಶದಿಂದ ಇತರೆ ವ್ಯಕ್ತಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ ಅಕ್ರಮವಾಗಿ ಸೈಬರ್ ವಂಚನೆಯ ಮೂಲಕ ಹಣವನ್ನು ಗಳಿಸುವ ಉದ್ದೇಶದಿಂದ ಈ ರೀತಿಯಾಗಿ ಮಾಡಿರುತ್ತಾರೆ.

ಕರ್ನಾಟಕ ಮರಾಠ ಸಮುದಾಯ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಸಾರ್ವಜನಿಕರಿಗೆ ಆಗಬಹುದಾದ ನಷ್ಟ ಅನಾನೂಕೂಲಗಳನ್ನು ತಪ್ಪಿಸುವ ಉದ್ದೇಶದಿಂದ ಸೈಬರ್ ಅಪರಾಧಿಗಳನ್ನು ಪತ್ತೆ ಮಾಡುವ, ಸೈಬರ್ ಅಪರಾಧಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸದರಿ ಮ್ಯೂಲ್ ಖಾತೆಗಳ ಖಾತೆದಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ನೀಡಿದ ದೂರಿನ ಮೇರೆಗೆ ಸೈಬರ್ ಪೊಲೀಸ್ ಠಾಣಾ ಪ್ರತ್ಯೇಕ 2 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.

ದಾವಣಗೆರೆ: ಜಿಲ್ಲೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ; ಎಲ್ಲೆಲ್ಲಿ..?

ಈ ಪ್ರಕರಣಗಳಲ್ಲಿ ದಾವಣಗೆರೆ ಮೂಲದ ಆರೋಪಿತರಾದ ಎ-1 ಪರಶುರಾಮ ವೈ, 30 ವರ್ಷ, ಹಾಗೂ ಎ-2 ಇಂಜಿನೀಯರಿಂಗ್ ವಿದ್ಯಾರ್ಥಿ, 19 ವರ್ಷ ಇವರುಗಳನ್ನು ಬಂಧಿಸಿ ವಿಚಾರಣೆ ಕೈಗೊಳ್ಳಲಾಗಿರುತ್ತದೆ.

ಸದರಿ ಎ-1 ಆರೋಪಿತನಾದ ಪರಶುರಾಮ ವೈ, ಈತನು ಸೈಬರ್ ವಂಚನೆ ಮಾಡಲೆಂದೇ ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 06 ಖಾತೆ ತೆರೆದಿರುವುದು ಪತ್ತೆಯಾಗಿರುತ್ತದೆ ಆರೋಪಿತನ 06 ಬ್ಯಾಂಕ್ ಖಾತೆಗಳ ವಿರುದ್ದ ದೇಶದ ವಿವಿಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 95 ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿರುತ್ತವೆ. ಸದರಿ ಆರೋಪಿತನಿಂದ 1 ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಎರಡನೇ ಆರೋಪಿತನಾದ ಇಂಜಿನೀಯರಿಂಗ್ ವಿದ್ಯಾರ್ಥಿ, ಈತನು ಸಹ ಸೈಬರ್ ವಂಚನೆ ಮಾಡಲೆಂದೇ ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 2 ಖಾತೆ ತೆರೆದಿರುವುದು ಪತ್ತೆಯಾಗಿರುತ್ತದೆ ಆರೋಪಿಯ 2 ಬ್ಯಾಂಕ್ ಖಾತೆಗಳ ವಿರುದ್ದ ದೇಶದ ವಿವಿಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 08 ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿರುತ್ತವೆ.

ಆರೋಪಿತನಿಂದ 1 ಲ್ಯಾಪ್ ಲ್ಯಾಪ್ ಮತ್ತು 1 ಮೊಬೈಲ್ ವಶಪಡಿಸಿಕೊಂಡಿರುತ್ತದೆ. ತನಿಖೆ ಮುಂದುವರೆದಿರುತ್ತದೆ. ಮೇಲ್ಕಂಡ ಪ್ರಕರಣಗಳಲ್ಲಿ ಆರೋಪಿತರ ಪತ್ತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳಾದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ಮಾರ್ಗದರ್ಶನದಲ್ಲಿ ಸೈಬರ್ ಪೊಲೀಸ್ ಠಾಣೆಯ ಡಿವೈಎಸ್ಪಿ ಬಂಕಾಳಿ ನಾಗಪ್ಪ, ಪೊಲೀಸ್ ನಿರೀಕ್ಷಕ ಅಶ್ವಿನ್ ಕುಮಾರ್ ಆರ್ ಜಿ., ಎಎಸ್ಐ ದೇವರಾಜ್, ಎಎಸ್ ಐ ರಾಜಶೇಖರ್ ನಾಯಕ, ಸಿಬ್ಬಂದಿಗಳಾದ ರವಿ, ನಿಜಲಿಂಗಪ್ಪ, ಆಶೋಕ್, ಸೋಮಶೇಖರ್, ಅಶೋಕ್, ಮಂಜುನಾಥ, ಯೋಗಿಶ್ ನಾಯ್ಕ್, ಸಣ್ಣ ಬುಡೇನ್ ವಲಿ, ಉಮೇಶ್, ಶೋಭಾ, ದೇವಕಿಬಾಯಿ, ಮುತ್ತುರಾಜ್, ಲೋಹಿತ್, ಮಲ್ಲಿಕಾರ್ಜುನ ಹಾದಿಮನಿ ರವರುಗಳನ್ನು ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್ ಟಿ., ಐಪಿಎಸ್ ರವರು ಪ್ರಶ೦ಸನೆ ವ್ಯಕ್ತಪಡಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *