ದಾವಣಗೆರೆ: ಸೈಬರ್ ವಂಚನೆ; ಪ್ರತ್ಯೇಕ ಎರಡು ಪ್ರಕರಣದಲ್ಲಿ ಶಿಕ್ಷಕಿ, ಪ್ರಾಧ್ಯಾಪಕಿ ಖಾತೆಯಿಂದ ಬರೋಬ್ಬರಿ 6.45 ಲಕ್ಷ ವಂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸೈಬರ್ ವಂಚನೆ (ಆನ್ ಲೈನ್ ವಂಚನೆ) ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಪ್ರತ್ಯೇಕ ಎರಡು ಪ್ರಕರಣದಲ್ಲಿ ಪ್ರಾಧ್ಯಾಪಕಿ ಮತ್ತು ಶಿಕ್ಷಕಯೊಬ್ಬರು ವಂಚನೆಗೆ ಒಳಗಾಗಿದ್ದಾರೆ. ಈ ಎರಡು ಪ್ರಕರಣದಿಂದ ಒಟ್ಟು 6.45 ಲಕ್ಷ ವಂಚನೆ ನಡೆದಿದೆ.

ಪ್ರಕರಣ 1; ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಕೊಂಡಜ್ಜಿ ಗ್ರಾಮದ ಸಿದ್ದಲಿಂಗಮ್ಮ ಹಣ ಕಳೆದುಕೊಂಡ ಪ್ರಾಧ್ಯಾಪಕಿಯಾಗಿದ್ದಾರೆ. ಅವರ ಬ್ಯಾಂಕ್‌ ಖಾತೆಯಿಂದ ಅಕ್ಟೋಬರ್‌, ಡಿಸೆಂಬರ್‌ ತಿಂಗಳಲ್ಲಿ 5,000, 35,000, 95,000 ದಂತೆ ಹಂತಹಂತವಾಗಿ ಒಟ್ಟು 3.80 ಲಕ್ಷ ಹಣ ತೆಗೆದುಕೊಳ್ಳಲಾಗಿದೆ ಎಂದು ಸಿಇಎನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ 2; ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಷೇರು ಖರೀದಿಸಿದರೆ ಲಾಭ ಗಳಿಸಬಹುದು ಎಂಬ ವಂಚಕರ ಮಾತು ನಂಬಿ ನಂಬಿಸಿ ಶಾಲಾ ಶಿಕ್ಷಕರೊಬ್ಬರು 2.65 ಲಕ್ಷ ಕಳೆದುಕೊಂಡಿದ್ದಾರೆ. ದಾವಣಗೆರೆ ತಾಲ್ಲೂಕಿನ ಹಾಲುವರ್ತಿ ಗ್ರಾಮದ ಬಿ.ಪಿ. ರೂಪಾ ಹಣ ಕಳೆದುಕೊಂಡವರಾಗಿದ್ದಾರೆ. ದಿನೇಶ್‌ ಎಂಬುವವರು ಷೇರು ಖರೀದಿಸಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ 2.65 ಲಕ್ಷ ವಂಚಿಸಿದ್ದಾರೆ ಎಂದು ರೂಪಾ ಅವರು ದೂರು ನೀಡಿದ್ದಾರೆ. ಸಿಇಎನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *