Connect with us

Dvgsuddi Kannada | online news portal | Kannada news online

ದಾವಣಗೆರೆ: ಸಿಲಿಂಡರ್ ಸ್ಫೋಟ; ಸುಟ್ಟು ಕರಕಲಾದ ಮನೆ- ಅದೃಷ್ಟವಶಾತ್ ತಾಯಿ, ಮಗ ಪಾರು

ಚನ್ನಗಿರಿ

ದಾವಣಗೆರೆ: ಸಿಲಿಂಡರ್ ಸ್ಫೋಟ; ಸುಟ್ಟು ಕರಕಲಾದ ಮನೆ- ಅದೃಷ್ಟವಶಾತ್ ತಾಯಿ, ಮಗ ಪಾರು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕು ಚನ್ನೇಶಪುರ ಗ್ರಾಮದ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸೋರಿಕೆಯಿಂದ ಸ್ಫೋಟಗೊಂಡ ಪರಿಣಾಮ‌ ಇಡೀ ಮನೆಗೆ ಬೆಂಕಿ ತಗುಲಿದ್ದು, ಭಾರಿ ದುರಂತ ತಪ್ಪಿದೆ. ಅದೃಷ್ಟವಶಾತತ್ ತಾಯಿ, ಮಗ ಪಾರಾಗಿದ್ದಾರೆ.

ಚನ್ನೇಶಪುರ ಗ್ರಾಮದ ಕಾಶಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ.‌ ಸಿಲಿಂಡರ್ ಪೈಪ್ ನಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡ ಕೂಡಲೇ ತಾಯಿ, ಮಗ ಹೊರಗೆ ಓಡಿ ಬಂದಿದ್ದಾರೆ.

ಕಾಶಪ್ಪ ಮತ್ತು ಅವರ ತಾಯಿ ಹೊರಬಂದ ಎರಡೇ ನಿಮಿಷದಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಬೆಂಕಿ ತಗುಲಿದ್ದು, ಇಡಿ ಮನೆ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ನಡೆಸಿದ್ದಾರೆ. ಸ್ಪೋಟ, ಬೆಂಕಿಯಿಂದಾಗಿ ಇಡೀ ಮನೆ ಸುಟ್ಟು ನಾಶವಾಗಿದೆ.

ಸಿಲಿಂಡರ್ ಸ್ಫೋಟದ ಪರಿಣಾಮ ಇಡೀ ಗ್ರಾಮದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಇದರಿಂದ ಗ್ರಾಮಸ್ಥರು ಗಾಬರಿಗೊಂಡಿದ್ದರು. ಅಗ್ನಿಶಾಮಕ ದಳ ಬೆಂಕಿ‌ ನಿಯಂತ್ರಣ ಮಾಡಿ, ಇತರೆ ಮನೆಗಳಿಗೆ ಬೆಂಕಿ ಹರಡದಂತೆ ತಡೆಯಲು ಹರಸಾಹಸ ಪಡಬೇಕಾಯಿತು.ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top