ದಾವಣಗೆರೆ: ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಅ.22 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಹಾವೇರಿಯಿಂದ ಹೊರಟು ದಾವಣಗೆರೆ ಆಗಮಿಸುವರು. ನಂತರ 4.30 ರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ ಜಿಲ್ಲಾ ಶಾಖೆ ದಾವಣಗೆರೆ ವತಿಯಿಂದ ಏರ್ಪಡಿಸಲಾಗಿರುವ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಭಾಗವಹಿಸುವರು. ಹಾಗೂ ಅಂದು ದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರೆಂದು ಸಚಿವರ ಅಪ್ತ ಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.