ದಾವಣಗೆರೆ: ಜಿಲ್ಲೆಯಲ್ಲಿ ಗ್ರಾಮ ಒನ್ ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯಡಿ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೊರಟಿಕೆರೆ, ದೊಡ್ಡಬ್ಬಿಗೆರೆ, ಬುಳ್ಳಸಾಗರ, ಬೆಳ್ಳಿಗನೂರು, ಹಬ್ಬಳಗೆರೆ, ತಿಪ್ಪಗೊಂಡನಹಳ್ಳಿ, ಬೆಳಲಗೆರೆ, ಕೋಟೆಹಾಳು, ನಲ್ಲೂರು. ನ್ಯಾಮತಿ ತಾಲ್ಲೂಕಿನ ಗುಡ್ಡೆಹಳ್ಳಿ. ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹೆಬ್ಬಾಳು, ಅಣಬೇರು. ಹರಿಹರ ತಾಲ್ಲೂಕಿನ ಜಿಗಳಿ. ಹೊನ್ನಾಳಿ ತಾಲ್ಲೂಕಿನ ಎಕ್ಕನಹಳ್ಳಿ, ಮಾಸಡಿ, ತಿಮ್ಲಾಪುರ. ಜಗಳೂರು ತಾಲ್ಲೂಕಿನ ಕೆಚ್ಚೇನಹಳ್ಳಿ, ಬಿದರಕೆರೆ, ಸೊಕ್ಕೆ ಗ್ರಾಮಗಳ ಆಸಕ್ತ ಅಭ್ಯರ್ಥಿಗಳು www.karnatakaone.gov.in ಅಥವಾ sevasindhuservices.karnataka.gov.in ಪೋರ್ಟಲ್ ಮೂಲಕ ಅರ್ಜಿ ದಾಖಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 7829274377, 9743669741, 9686579224 ಅಥವಾ ಇ-ಮೇಲ್ ವಿಳಾಸ onehelpdesk@karnataka.gov.in ಸಂಪರ್ಕಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *