ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಂಸ್ಥಾಪಕರಾದ ಶ್ರೀ ಹಾನಗಲ್ ಕುಮಾರಸ್ವಾಮಿಗಳವರ ಜೀವನ ಆಧಾರಿತ ಸಿನಿಮ “ವಿರಾಟಪುರ ವಿರಾಗಿ” ಇದೇ ತಿಂಗಳ ದಿನಾಂಕ 13ರಂದು(ಶುಕ್ರವಾರ) ರಾಜ್ಯದ್ಯಂತ ಬಿಡುಗಡೆಯಾಗಲಿದೆ.
ಈ ಸಿನಿಮವು ದಾವಣಗೆರೆ ನಗರದ ಎಸ್.ಎಸ್. ಮಾಲ್ ನಲ್ಲಿರುವ “ಮೂವಿ ಟೈಮ್” ಚಿತ್ರಮಂದಿರದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರದರ್ಶನವಾಗುತ್ತಿದ್ದು, ಈ ಸಿನಿಮಾದ ಉದ್ಘಾಟನೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ, ಎಸ್.ಎಸ್. ಗಣೇಶ್, ಅಣಬೇರು ರಾಜಣ್ಣ ಹಾಗೂ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯಲಿದೆ.
ಮಹಾಸಭಾದ ಸರ್ವ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೊರಲಾಗಿದೆ.



