ದಾವಣಗೆರೆ: ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ 25 ಪ್ರಕರಣ ದಾಖಲು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಹರಿಹರ ನಗರದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 25 ಪ್ರಕರಣಗಳನ್ನು ದಾಖಲಿಸಿ 3700 ರೂ. ದಂಡ ವಿಧಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅವರ ಮಾರ್ಗಸೂಚಿಯಂತೆ ಅಧಿಕಾರಿಗಳ ತಂಡ ಮಂಗಳವಾರ(ಜ.17) ಬೆಳಿಗ್ಗೆ ವಿವಿಧ ಹೋಟೆಲ್, ಬೇಕರಿ, ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ನಿಯಮ ಉಲ್ಲಂಘಿಸಿದವರ ಪ್ರಕರಣ ದಾಖಲಿಸಿದೆ. ಕೋಟ್ಪಾ ಕಾಯ್ದೆ-2003 ಕಾಯ್ದೆಯ ಸೆಕ್ಷನ್ 04 ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸುವಂತೆ ಹೋಟೆಲ್ ಬೇಕರಿ ಮಾಲೀಕರಿಗೆ ಅಧಿಕಾರಿಗಳ ತಂಡ ಸೂಚನೆ ನೀಡಿದೆ.

ದಾಳಿಯಲ್ಲಿ ಹರಿಹರ ತಹಶೀಲ್ದಾರ್ ಅಶ್ವತ್.ಎಂ.ಬಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಮೊಹನ್, ಆಹಾರ ಸುರಕ್ಷತಾ ಅಧಿಕಾರಿ ಕೊಟ್ರೇಶಪ್ಪ.ಹೆಚ್, ಸಮಾಜ ಕಾರ್ಯಕರ್ತ ದೇವರಾಜ.ಕೆ.ಪಿ., ಎನ್‍ಟಿಸಿಪಿ ಸಮಾಜ ಕಾರ್ಯಕರ್ತ ಎಂ.ವಿ ಹೊರಕೇರಿ, ಆರೋಗ್ಯ ಮೇಲ್ವಿಚಾರಕರಾದ ಬಿ.ಹೆಚ್ ಈ ಓ ನಾಗರಾಜ್, ಉಮಣ್ಣ.ಎಂ , ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಂತೋಷ್, ಆರೋಗ್ಯ ನಿರೀಕ್ಷಕ, ನಗರಸಭೆಯ ಪೊಲೀಸ್ ಸಿಬ್ಬಂದಿ ಹನುಮಂತರಾಯ ಹಾಜರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *