Connect with us

Dvgsuddi Kannada | online news portal | Kannada news online

ದಾವಣಗೆರೆ: ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಜಾಗೃತಿ ಮೂಡಿಸಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ

FB IMG 1673967693175

ದಾವಣಗೆರೆ

ದಾವಣಗೆರೆ: ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಜಾಗೃತಿ ಮೂಡಿಸಲು ಕಲಾ ತಂಡಗಳಿಂದ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಬಾಲಕಾರ್ಮಿಕ ಸೊಸೈಟಿ ವತಿಯಿಂದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಬೀದಿನಾಟಕದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕಲಾತಂಡಗಳ ಸದಸ್ಯರು ಜಿಲ್ಲೆಯವರೇ ಆಗಿದ್ದು, 8 ಜನ ಕಲಾವಿದರು ಮತ್ತು ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗು ಒಬ್ಬರು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು.
ಕಲಾತಂಡಗಳ ನೊಂದಣಿಯು ಪ್ರತಿವರ್ಷ ನವೀಕರಣಗೊಂಡಿರಬೇಕು ಹಾಗೂ ಇಲಾಖೆಯ ಯೋಜನೆಗಳ ಕುರಿತ ಬೀದಿ ನಾಟಕ ಪ್ರದರ್ಶಿಸಿದ ಅನುಭವವಿರಬೇಕು.
ಬೀದಿನಾಟಕಗಳನ್ನು ನಿಗಧಿಪಡಿಸಿದ ತಾಲ್ಲೂಕು ಮತ್ತು ಸ್ಥಳಗಳಲ್ಲಿಯೇ ಪ್ರದರ್ಶಿಸಬೇಕು ಮತ್ತು ಪ್ರದರ್ಶನದ ಛಾಯಾಚಿತ್ರಗಳನ್ನು ತಮ್ಮ ಖರ್ಚಿನಲ್ಲಿ ಸಲ್ಲಿಸಬೇಕು.

ಅರ್ಜಿಗಳನ್ನು ಜ.24 ಸಂ.5 ಗಂಟೆಯೊಳಗೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕಚೇರಿಗೆ ಸಲ್ಲಿಸಬೇಕು ಮತ್ತು ಅರ್ಜಿ ಸ್ವೀಕರಿಸಿದ ನಂತರ ಕಲಾತಂಡಗಳ ಪೂರ್ವಬಾವಿ ಪ್ರದರ್ಶನದ ದಿನಾಂಕವನ್ನು ತಿಳಿಸಲಾಗುವುದೆಂದು ಬಾಲಕಾರ್ಮಿಕ ಯೋಜನಾ ಸೊಸೈಟಿ ಕಚೇರಿ ಸಹಾಯಕ ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top