ದಾವಣಗೆರೆ: ಕಳಪೆ ಕಾಮಗಾರಿ ಸಹಿಸಲ್ಲ, ಗುಣಮಟ್ಟದ ಕೆಲಸ ಮಾಡಿ: ಪಾಲಿಕೆ ಆಯುಕ್ತೆ ರೇಣುಕಾ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಳಪೆ ಕಾಮಗಾರಿ ಸಹಿಸಲ್ಲ, ಗುಣಮಟ್ಟದ ಕಾಮಗಾರಿ ಆಗಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಹಾನಗರ ಪಾಲಿಕೆಯ 38ನೇ ವಾರ್ಡ್ ಎಂಸಿಸಿ ಬಿ ಬ್ಲಾಕ್ ನ ಮೂರನೇ ಮುಖ್ಯ ರಸ್ತೆಯ ಎರಡನೇ ತಿರುವಿನಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ ವೀಕ್ಷಿಸಿದ ವೇಳೆ ಮಾತನಾಡಿದ ಅವರು, ಗುತ್ತಿದೆದಾರರು ಕಾಮಗಾರಿ ಕುರಿತಂತೆ ಗುಣಮಟ್ಟ ಕಾಪಾಡಿಕೊಳ್ಳಬೇಕು. ಜನರು ಮೆಚ್ಚುಗೆ ವ್ಯಕ್ತಪಡಿಸುವ ರೀತಿಯಲ್ಲಿ ಕೆಲಸ ಆಗಬೇಕು ಎಂದರು.

ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ವಾರ್ಡ್ ನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಈಗ ನಡೆಯುತ್ತಿರುವ ಕಾಂಕ್ರಿಟ್ ಕಾಮಗಾರಿ ವೀಕ್ಷಿಸಲು ಆಯುಕ್ತರು ಆಗಮಿಸಿದ್ದು ಖುಷಿ ತಂದಿದೆ. ಗುತ್ತಿಗೆದಾರರಿಗೆ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು.

ಕಾಂಕ್ರಿಟ್ ರಸ್ತೆ ಆಗಬೇಕೆಂಬ ಜನರ ಬೇಡಿಕೆ ಈಡೇರಿಸಿದ್ದೇವೆ. ಮನೆ ಬಾಗಿಲಿಗೆ ಹೋಗಿ ಜನರ ಸೇವಕನಂತೆ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ. ವಾರ್ಡ್ ನ ಜನರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಇದು ಸಂತಸ ತಂದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಇಇ ಮನೋಹರ್, ಗುತ್ತಿಗೆದಾರ ಹನುಮಂತ ನಾಯ್ಕ್, ಎಂಸಿಸಿ ಬಿ ಬ್ಲಾಕ್ ನ ಹಿರಿಯರು, ಸ್ಥಳೀಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *