Connect with us

Dvgsuddi Kannada | online news portal | Kannada news online

ದಾವಣಗೆರೆ: ಜಪ್ತಿ ಮಾಡಿದ ಪಡಿತರ ಅಕ್ಕಿ ಫೆ.03 ರಂದು ಬಹಿರಂಗ ಹರಾಜು

ದಾವಣಗೆರೆ

ದಾವಣಗೆರೆ: ಜಪ್ತಿ ಮಾಡಿದ ಪಡಿತರ ಅಕ್ಕಿ ಫೆ.03 ರಂದು ಬಹಿರಂಗ ಹರಾಜು

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳಲಾಗಿದ್ದ 5.18 ಕ್ವಿಂಟಾಲ್ ಅಕ್ಕಿಯನ್ನು ನ.10 ರಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಜಪ್ತಿ ಮಾಡಿತ್ತು. ಈ ಧಾನ್ಯವನ್ನು ಫೆ.03 ರಂದು ದಾವಣಗೆರೆಯ ಎಪಿಎಂಸಿ ಕಚೇರಿಯ ಹಿಂಭಾಗದಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್ ಗ್ರಾಮಾಂತರ ಸಗಟು ಮಳಿಗೆ, ಎ.ಪಿ.ಎಂ.ಸಿ ಯಾರ್ಡ್, ಡಿ ಬ್ಲಾಕ್ ದಾವಣಗೆರೆ ಬಹಿರಂಗ ಹರಾಜು ಪ್ರಕ್ರಿಯೆ ಜರುಗಲಿದೆ.ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು.

ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು.ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ಶಿರಸ್ತೆದಾರರು ಮೊ.ಸಂ:9480065633 ಮತ್ತು ಆಹಾರ ನಿರೀಕ್ಷಕರ ಮೊ.ಸಂ: 8722433298 ನ್ನು ಸಂಪರ್ಕಿಸಬಹುದೆಂದು ತಹಶೀಲ್ದಾರ್ ಡಾ.ಅಶ್ವಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});