Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರೀಯ ರೋಗ ಲಕ್ಷಣ ಶಾಸ್ತ್ರಜ್ಞರ ಸಂಘದ ರಾಜ್ಯ ಶಾಖೆ ಅಧ್ಯಕ್ಷರಾಗಿ ಡಾ. ಸುರೇಶ್ ಹನಗವಾಡಿ ಆಯ್ಕೆ

IMG 20230213 104115

ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ರೋಗ ಲಕ್ಷಣ ಶಾಸ್ತ್ರಜ್ಞರ ಸಂಘದ ರಾಜ್ಯ ಶಾಖೆ ಅಧ್ಯಕ್ಷರಾಗಿ ಡಾ. ಸುರೇಶ್ ಹನಗವಾಡಿ ಆಯ್ಕೆ

ದಾವಣಗೆರೆ; ನಗರದ ಜೆಜೆಎಂ ವೈದ್ಯಕೀಯ ಮಹಾ ವಿದ್ಯಾಲಯದ ಪೆಥಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಸುರೇಶ್ ಹನಗವಾಡಿ ಅವರು ರಾಷ್ಟ್ರೀಯ ರೋಗ ಲಕ್ಷಣ ಶಾಸ್ತ್ರಜ್ಞರ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಇತ್ತೀಚೆಗೆ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಡಾ. ಹನಗವಾಡಿ ಅವರನ್ನು ಅವಿರೋಧವಾಗಿ ಆಯ್ಕೆ
ಮಾಡಲಾಗಿದೆ. ಸುಮಾರು 30 ವರ್ಷಗಳಿಂದ ರೋಗ ಲಕ್ಷಣ ಕ್ಷೇತ್ರದಲ್ಲಿ ವಿಶೇಷವಾಗಿ ರಕ್ತ ಮತ್ತು ರಕ್ತದ ರೋಗಗಳ ಕ್ಷೇತ್ರದಲ್ಲಿ ಡಾ. ಸುರೇಶ್ ಹನಗವಾಡಿ ಅವರು ಸಾಕಷ್ಟು ಸಂಶೋಧನೆ ಮಾಡಿದ್ದಾರೆ. ವೈದ್ಯಕೀಯ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಬೋಧನೆ ಹಾಗೂ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಹಿಮೊಫಿಲಿಯಾ ಸೊಸೈಟಿಯನ್ನು ಸ್ಥಾಪಿಸಿ, ರಕ್ತಸ್ರಾವ ರೋಗಿಗಳಿಗೆ ವಿಶಿಷ್ಟ ಸೇವೆ ನೀಡುತ್ತಾ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top