Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ರಾಜ್ಯ ಮಟ್ಟದ ಮಹಿಳಾ ಬ್ಯಾಂಕ್ ಉದ್ಯೋಗಿಗಳ ಸಮಾವೇಶ

ದಾವಣಗೆರೆ

ದಾವಣಗೆರೆ: ನಾಳೆ ರಾಜ್ಯ ಮಟ್ಟದ ಮಹಿಳಾ ಬ್ಯಾಂಕ್ ಉದ್ಯೋಗಿಗಳ ಸಮಾವೇಶ

ದಾವಣಗೆರೆ: ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ ವತಿಯಿಂದ ನಾಳೆ (ಮಾ.11) ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ 6 ನೇ ರಾಜ್ಯ ಮಟ್ಟದ ಮಹಿಳಾ ಬ್ಯಾಂಕ್ ಉದ್ಯೋಗಿಗಳ ಸಮಾವೇಶ ನಡೆಯಲಿದೆ ಎಂದು ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ತಿಳಿಸಿದರು‌.

ಶನಿವಾರ ಬೆಳಿಗ್ಗೆ 9.00 ಘಂಟೆಗೆ ನಗರದ ಗುಂಡಿ ವೃತ್ತದಿಂದ ಕುವೆಂಪು ಕನ್ನಡ ಭವನದವರೆಗೆ ಪ್ರತಿನಿಧಿಗಳ ಮೆರವಣಿಗೆ, 9-45 ಕ್ಕೆ ಎಐಬಿಇಎ ಸಂಘದ ಧ್ವಜಾರೋಹಣ ಹಾಗೂ 10.00 ಘಂಟೆಗೆ ಆರಂಭವಾಗುವ ಸಮಾವೇಶದ ಅಧ್ಯಕ್ಷತೆಯನ್ನು ಕೆಪಿಬಿಇಎಫ್ ಮಹಿಳಾ ಸಮಿತಿಯ ಅಧ್ಯಕ್ಷೆ ಆರ್.ಎಸ್.ಸುಮತಿ ವಹಿಸುವರು. ಉದ್ಘಾಟಕರಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಹೆಚ್.ವೆಂಕಟಾಚಲಂ, ಮುಖ್ಯ ಅತಿಥಿಗಳಾಗಿ ಖ್ಯಾತ ಲೇಖಕಿ ಹೆಚ್.ಜಿ.ಜಯಲಕ್ಷ್ಮಿ ಹಾಗೂ ಎಐಬಿಇಎ ನ ಜಂಟಿ ಕಾರ್ಯದರ್ಶಿ ಲಲಿತಾ ಜೋಷಿ ಆಗಮಿಸುವರು. ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಅಧ್ಯಕ್ಷ ಎಂ.ಎಸ್.ಶ್ರೀನಿವಾಸನ್, ಪ್ರಧಾನ ಕಾರ್ಯದರ್ಶಿ ಎಂ.ಜಯನಾಥ್, ಮಹಿಳಾ ಕೌನ್ಸಿಲ್‌ನ ಸಂಚಾಲಕಿ ಶ್ರೀಲತಾ ಕುಲಕರ್ಣಿ, ಕೆಪಿಬಿಇಎಫ್‌ನ ಮಾಜಿ ಅಧ್ಯಕ್ಷ ಹೆಚ್.ವಸಂತ ರೈ ಉಪಸ್ಥಿತರಿರುವರು. ಅಪರಾಹ್ನ ಪ್ರತಿನಿಧಿ ಅಧಿವೇಶನ ನಡೆಯಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top