Connect with us

Dvgsuddi Kannada | online news portal | Kannada news online

ದಾವಣಗೆರೆ: 10 ರೂ. ನಾಣ್ಯದ ಚಲಾವಣೆಗೆ ಯಾವುದೇ ಸಮಸ್ಯೆಯಿಲ್ಲ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಬಂಧಕ ಮೋನಿ ರಾಜಬ್ರಹ್ಮ

IMG 20230310 WA0000

ದಾವಣಗೆರೆ

ದಾವಣಗೆರೆ: 10 ರೂ. ನಾಣ್ಯದ ಚಲಾವಣೆಗೆ ಯಾವುದೇ ಸಮಸ್ಯೆಯಿಲ್ಲ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಬಂಧಕ ಮೋನಿ ರಾಜಬ್ರಹ್ಮ

ದಾವಣಗೆರೆ: ಹತ್ತು ರೂಪಾಯಿ ನಾಣ್ಯ ಸೇರಿದಂತೆ ಯಾವುದೇ ನಾಣ್ಯಗಳ ಚಲಾವಣೆಗೆ ಯಾವುದೇ ಸಮಸ್ಯೆಯಿಲ್ಲ. ಸಾರ್ವಜನಿಕರು ನಿರ್ಭೀತರಾಗಿ ನಾಣ್ಯಗಳ ಚಲಾವಣೆ ಮಾಡಬಹುದೆಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಬಂಧಕ ಮೋನಿ ರಾಜ ಬ್ರಹ್ಮ ತಿಳಿಸಿದರು.

ತೋಳಹುಣಸೆಯ ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ದಾವಣಗೆರೆ ಲೀಡ್ ಬ್ಯಾಂಕ್ ಕಛೇರಿ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜಂಟಿಯಾಗಿ ಆಯೋಜಿಸಿದ್ದ “ಕರೆನ್ಸಿ ಸಪ್ತಾಹ” ವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಕಲಿ ನಾಣ್ಯಗಳು ಮಾರುಕಟ್ಟೆಯಲ್ಲಿ ಚಲಾವಣೆಯಾಗುತ್ತಿದೆ ಎಂಬ ಸುಳ್ಳು ಸುದ್ದಿಯಿಂದಾಗಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ನಾಣ್ಯಗಳ ಚಲಾವಣೆಗೆ ಹಿಂದೇಟು ಹಾಕುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ ಜನರು ಯಾವುದೇ ಗೊಂದಲವಿಲ್ಲದೇ ಎಲ್ಲಾ ರೀತಿಯ ನಾಣ್ಯಗಳನ್ನು ಚಲಾವಣೆ ಮಾಡಬಹುದೆಂದು ಅವರು ತಿಳಿಸಿದರು.

ಹಾಗೆಯೇ ಹರಿದ ಹಾಗೂ ಚಲಾವಣೆಗೆ ಯೋಗ್ಯವಲ್ಲದ ಹಳೆಯ ನೋಟುಗಳನ್ನು ಸಾರ್ವಜನಿಕರು ಯಾವುದೇ ಬ್ಯಾಂಕಿನಲ್ಲಿ ಬದಲಾವಣೆ ಅಥವಾ ತಮ್ಮ ಖಾತೆಗೆ ಜಮಾ ಮಾಡಬಹುದಾಗಿದೆ. ಯಾವುದೇ ಬ್ಯಾಂಕಿನ ಸಿಬ್ಬಂದಿ ನಿರಾಕರಿಸುವಂತಿಲ್ಲ ಎಂದು ಮೋನಿ ರಾಜ ಬ್ರಹ್ಮ ತಿಳಿಸಿದರು.

ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕಿ ಹೆಚ್.ರವಿಕಲಾ ಅವರು ಮಾತನಾಡಿ ನೋಟುಗಳು ಹಾಗೂ ನಾಣ್ಯಗಳ ವ್ಯವಹಾರದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲೋಸುಗ ಈ “ಕರೆನ್ಸಿ ಸಪ್ತಾಹ” ವನ್ನು ಮಾರ್ಚ್ 06 ರಿಂದ ಮಾರ್ಚ್ 10 ರವರೆಗೆ ದೇಶದಾದ್ಯಂತ ಆಯೋಜಿಸಲಾಗುತ್ತಿದೆ. ನಾಣ್ಯಗಳನ್ನು ಸ್ವೀಕರಿಸಲು ವ್ಯಾಪಾರಸ್ಥರು, ಸಾರ್ವಜನಿಕರು ಸೇರಿದಂತೆ ಯಾರೂ ಸಹ ನಿರಾಕರಿಸುವುದು ಅಪರಾಧವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ಸಿಬ್ಬಂದಿಗಳಾದ ಸುಧೀರ್ ರೆಡ್ಡಿ, ಪಿ.ಮೂರ್ತಿ ನಾಯ್ಕ್, ಕೆ.ರಾಘವೇಂದ್ರ ನಾಯರಿ, ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಗಣೇಶ್ ರಾವ್, ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top