Connect with us

Dvgsuddi Kannada | online news portal | Kannada news online

ಉಚ್ಚೆಂಗೆಮ್ಮದೇವಿ ಹುಂಡಿ ಎಣಿಕೆ; 27 ಲಕ್ಷ ಸಂಗ್ರಹ

IMG 20211005 WA0002

ಹರಪನಹಳ್ಳಿ

ಉಚ್ಚೆಂಗೆಮ್ಮದೇವಿ ಹುಂಡಿ ಎಣಿಕೆ; 27 ಲಕ್ಷ ಸಂಗ್ರಹ

ಉಚ್ಚಂಗಿದುರ್ಗ: ಐತಿಹಾಸಿಕ ಧಾರ್ಮಿಕ ಕ್ಷೇತ್ರ ಉಚ್ಚೆಂಗೆಮ್ಮದೇವಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಎಣಿಕೆ ಮಾಡಲಾಗಿದ್ದು, ಬರೋಬ್ಬರಿ 27,42,622 ಸಂಗ್ರಹವಾಗಿದೆ ಎಂದು ಶ್ರೀ ಉತ್ಸವಾoಭ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ತಿಳಿಸಿದ್ದಾರೆ.

ಕೊರೊನಾ 2 ನೇ ಅಲೆ ಮುನ್ನೆಚ್ಚರಿಕೆ ಹಿನ್ನೆಲೆ ಮೂರ್ನಾಲ್ಕು ತಿಂಗಳು ಹಾಗೂ ಶ್ರಾವಣ ಮಾಸದ ಶುಕ್ರವಾರ, ಮಂಗಳವಾರ,ಹುಣ್ಣಿಮೆ ಅಮಾವಾಸ್ಯೆ ದಿನಗಳಲ್ಲಿ ದೇವಸ್ಥಾನ ಬಂದ್ ಮಾಡಲಾಗಿದ್ದರೂ, ಹುಂಡಿಯಲ್ಲಿ ನಿರೀಕ್ಷೆಗೂ ಮೀರಿ ಕಾಣಿಕೆ ಸಂಗ್ರಹವಾಗಿದೆ.

ಹುಂಡಿ ಎಣಿಕೆ ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 7 ಘಂಟೆವರೆಗೂನಡೆಯಿತು ಈ ಹಿಂದೆ ಏಪ್ರಿಲ್ ತಿಂಗಳಿನಲ್ಲಿ ಹುಂಡಿ ಎಣಿಕೆ ನಡೆದಿತ್ತು. ಉಚ್ಚೆಂಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಹರಪನಹಳ್ಳಿ ಕೆನರಾ ಬ್ಯಾಂಕ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ
ಮೈಲಾರಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕೆನರಾ ಬ್ಯಾಂಕ್ ಮ್ಯಾನೇಜರ್ ಅನಿಲ್ ಕುಮಾರ್,ಅರ್ಚಕರಾದ ಹಾಲೇಶ್
ಗುಮಾಸ್ತರಾದ ರಮೇಶ್,ಸೇವಾದಳದ ಸಿಬ್ಬಂದಿ, ದೇವಸ್ಥಾನದ ಸಿಬ್ಬಂದಿ, ಪೊಲೀಸ್ ಇಲಾಖೆ,ಪ್ರವಾಸಿ ಪೊಲೀಸರು, ಗೃಹ ರಕ್ಷಕ ಸಿಬ್ಬಂದಿ, ಅರ್ಚಕರು,ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top