Connect with us

Dvgsuddi Kannada | online news portal | Kannada news online

ದಾವಣಗೆರೆ; ಕರೆಂಟ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಬೆಸ್ಕಾಂಗೆ 25 ಸಾವಿರ ದಂಡ ವಿಧಿಸಿದ ಗ್ರಾಹಕರ ಪರಿಹಾರ ಆಯೋಗ..!

ದಾವಣಗೆರೆ

ದಾವಣಗೆರೆ; ಕರೆಂಟ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಬೆಸ್ಕಾಂಗೆ 25 ಸಾವಿರ ದಂಡ ವಿಧಿಸಿದ ಗ್ರಾಹಕರ ಪರಿಹಾರ ಆಯೋಗ..!

ದಾವಣಗೆರೆ;ಕರೆಂಟ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಬೆಸ್ಕಾಂಗೆ 25 ಸಾವಿರ ದಂಡವನ್ನು ಗ್ರಾಹಕರ ಪರಿಹಾರ ಆಯೋಗ ವಿಧಿಸಿದೆ. ಬೆಸ್ಕಾಂ ಅಧಿಕಾರಿಗಳು ಕಾನೂನು ಬಾಹಿರವಾಗಿ ನಗರದ ಪವನ್ ಉಲ್ಲಾಸ್ ರೇವಣ್‍ಕರ್ ಮನೆಯ ವಿದ್ಯುತ್ ಸರಬರಾಜನ್ನು ತಡೆಹಿಡಿದಿದ್ದು, ದೂರಿನ ಮೇರೆಗೆ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗವು ಬೆಸ್ಕಾಂ ಕಂಪನಿ ಮೇಲೆ ರೂ.25000 ದಂಡ ವಿಧಿಸಲಾಗಿದೆ.

ಮೂರು ತಿಂಗಳಿಂದ ಬಿಲ್ ಪಾವತಿಸಿರುವುದಿಲ್ಲ ಎಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೆ ಗ್ರಾಹಕರು ಬೆಸ್ಕಾಂ ತನ್ನ ಸೇವೆಯನ್ನು ನೀಡುವಾಗ ಕೆಇಆರ್‍‌‌ ಸಿ ಕೋಡ್ 2004 ರ ನಿಯಮ-9 ರ ಅಡಿಯಲ್ಲಿನ ಪ್ರಕ್ರಿಯೆಗಳನ್ನು ಪಾಲಿಸದೇ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ಇದಕ್ಕೆ ಗ್ರಾಹಕರಿಗೆ ನೀಡುವ ಸೇವಾ ನ್ಯೂನ್ಯತೆ ಎಂದು ಜಿಲ್ಲಾ ಗ್ರಾಹಕರ ಪರಿಹಾರ ಆಯೋಗವು ಆದೇಶಿಸಿದೆ. ದೂರುದಾರನಿಗೆ ಉಂಟಾದ ಮಾನಸಿಕ ಹಿಂಸೆ ಮತ್ತು ಪ್ರಕರಣದ ನಡವಳಿಕೆಗೆ ರೂ.20,000 ಮತ್ತು ಪ್ರಕರಣದ ಖರ್ಚಿಗಾಗಿ ರೂ.5,000 ಗಳಂತೆ ಬೆಸ್ಕಾಂ ಕಂಪನಿಯವರು ದೂರುದಾರರಿಗೆ ಆದೇಶವಾದ 30 ದಿನಗಳ ಒಳಗಾಗಿ ನೀಡಬೇಕು, ತಪ್ಪಿದ್ದಲ್ಲಿ ಪ್ರತಿಶತ ಶೇ.6 ರಂತೆ ಬಡ್ಡಿಸಹಿತ ಪಾವತಿಸಬೇಕೆಂದು ಜೂನ್.21 ರಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಾಂತೇಶ ಈರಪ್ಪ ಶಿಗ್ಲಿ ಮತ್ತು ಮಹಿಳಾ ಸದಸ್ಯರಾದ ಗೀತಾ ಬಿ.ಯು ಅವರು ತೀರ್ಪು ನೀಡಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top