Connect with us

Dvgsuddi Kannada | online news portal | Kannada news online

ದಾವಣಗೆರೆ: ಕೊರೊನಾದಿಂದ ಮೃತಪಟ್ಟ 20 ಕುಟುಂಬಗಳಿಗೆ 1.50 ಲಕ್ಷ ಪರಿಹಾರ ವಿತರಣೆಗೆ ಸಿದ್ಧತೆ

davangere dc sp

ದಾವಣಗೆರೆ

ದಾವಣಗೆರೆ: ಕೊರೊನಾದಿಂದ ಮೃತಪಟ್ಟ 20 ಕುಟುಂಬಗಳಿಗೆ 1.50 ಲಕ್ಷ ಪರಿಹಾರ ವಿತರಣೆಗೆ ಸಿದ್ಧತೆ

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಕುಂದೂರು ಹಾಗೂ ಸುರಹೊನ್ನೆ ಗ್ರಾಮಗಳಲ್ಲಿ ಅ. 16 ರಂದು ಸಿಎಂ ಹಾಗೂ ಕಂದಾಯ ಸಚಿವರು ಗ್ರಾಮವಾಸ್ತವ್ಯ ಮಾಡಲಿದ್ದು, ಈ ಕಾರ್ಯಕ್ರಮದಲ್ಲಿ ಅವಳಿ ತಾಲ್ಲೂಕಿನ 20 ಕುಟುಂಬಗಳಿಗೆ ತಲಾ 1.50 ಲಕ್ಷ  ಪರಿಹಾರ ವಿತರಿಸಲಾಗುವುದು.

ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 01 ಲಕ್ಷ ಮತ್ತು ಕೇಂದ್ರ ದಿಂದ 50 ಸಾವಿರ ಸೇರಿದಂತೆ 1.5 ಲಕ್ಷ ರೂ. ಪರಿಹಾರವನ್ನು ಮೃತ ಕುಟುಂಬಗಳಿಗೆ ನೀಡುವ ಯೋಜನೆ ಜಾರಿಗೆ ಬಂದಿದ್ದು, ಕುಂದೂರು ಗ್ರಾಮದಲ್ಲಿ 05 ಹಾಗೂ ಸುರಹೊನ್ನೆ ಗ್ರಾಮದಲ್ಲಿ 15 ಜನ ಕೋವಿಡ್‍ನಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ಈ ಎಲ್ಲ 20 ಕುಟುಂಬಗಳಿಗೂ ಸರ್ಕಾರದ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿಗಳಿಂದಲೇ ವಿತರಣೆ ಆಗುವ ರೀತಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top