Connect with us

Dvgsuddi Kannada | online news portal | Kannada news online

ದಾವಣಗೆರೆ: ಸೆ.26ರಿಂದ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಅಭಿಯಾನ

FB IMG 1695387809560

ದಾವಣಗೆರೆ

ದಾವಣಗೆರೆ: ಸೆ.26ರಿಂದ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಅಭಿಯಾನ

ದಾವಣಗೆರೆ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 26 ರಿಂದ ಬರುವ ಅಕ್ಟೋಬರ್ 25 ರ ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲಸಿಕಾ ಅಭಿಯಾನದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಸಿದ್ದತೆಗಳ ಪರಿಶೀಲನೆ ನಡೆಸಿದರು. 2019 ರ ಜಾನುವಾರು ಗಣತಿಯನ್ವಯ ಜಿಲ್ಲೆಯಲ್ಲಿ 329700 ಜಾನುವಾರುಗಳಿವೆ.ಜಾನುವಾರುಗಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಲಸಿಕೆ ಬಹಳ ಪ್ರಮುಖವಾಗಿರುತ್ತದೆ. ಕಾಲಮಿತಿಯಲ್ಲಿ ಎಲ್ಲಾ ಜಾನುವಾರುಗಳಿಗೆ ಲಸಿಕೆ ಲಭ್ಯವಾಗುವುದರಿಂದ ಜಾನುವಾರುಗಳಿಗೆ ಹರಡುವ ರೋಗಗಳು ನಿಯಂತ್ರಣದಲ್ಲಿರುತ್ತವೆ. ನೊಂದಾಯಿತ ಮತ್ತು ನೊಂದಾಯಿತವಲ್ಲದ ಎಲ್ಲಾ ಜಾನುವಾರುಗಳಿಗೂ ಲಸಿಕೆಯನ್ನು ಹಾಕಬೇಕು, ಅನಧಿಕೃತವಾಗಿ ಸಾಗಿಸುವ ಜಾನುವಾರುಗಳನ್ನು ವಶಪಡಿಸಿಕೊಂಡಾಗ ಅಂತಹ ರಾಸುಗಳಿಗೂ ಲಸಿಕೆ ಸಿಗುವಂತೆ ಮಾಡಬೇಕು ಮತ್ತು ಲಸಿಕೆ ಹಾಕುವಾಗ ಎಲ್ಲಾ ರೈತರಿಗೆ ವಿಶ್ವಾಸ ಮೂಡಿಸುವಂತೆ ಸೂಚನೆ ನೀಡಿದರು.

ಜಾನುವಾರು ಸಂಖ್ಯೆ ಹೆಚ್ಚಳಕ್ಕೆ ಕ್ರಮ ವಹಿಸಿ; ಜಿಲ್ಲೆಯಲ್ಲಿ ಜನಸಂಖ್ಯೆ ಸುಮಾರು 19 ಲಕ್ಷದಷ್ಟಿದ್ದು ಜಾನುವಾರುಗಳ ಸಂಖ್ಯೆ ಹಸು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಸುಮಾರು 7 ಲಕ್ಷದಷ್ಟಿದೆ. ಜಾನುವಾರುಗಳ ಸಂಖ್ಯೆ ಹೆಚ್ಚಾದಷ್ಟು ನಮ್ಮ ಮಣ್ಣಿನ ಫಲವತ್ತತೆ ಹೆಚ್ಚಿ ಗುಣಮಟ್ಟ ಹೆಚ್ಚಿ ಜನರ ಆರೋಗ್ಯವು ಉತ್ತಮವಾಗಿರುತ್ತದೆ. ಆದ್ದರಿಂದ ಜನಸಂಖ್ಯೆ ಎಷ್ಟಿರುತ್ತದೆ, ಅದಕ್ಕಿಂತಲೂ ಹೆಚ್ಚು ಜಾನುವಾರುಗಳಿದ್ದಲ್ಲಿ ಉತ್ತಮ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಜಾನುವಾರು ಸಾಕಾಣಿಕೆ ಹೆಚ್ಚಾದಂತೆ ಜನರ ಆದಾಯ ಮಟ್ಟವು ಹೆಚ್ಚಲಿದೆ. ಜಾನುವಾರು ಸಾಕಾಣಿಕೆಯಿಂದ ಜನರ ಆದಾಯದಲ್ಲಿ ಖಾತರಿ ಇರುತ್ತದೆ. ಈ ನಿಟ್ಟಿನಲ್ಲಿ ಜನರು ಕುರಿ, ಮೇಕೆ ಸಾಕಾಣಿಕೆ, ಹಸು, ಎಮ್ಮೆ ಸಾಕಾಣಿಕೆ ಸೇರಿದಂತೆ ಹೈನುಗಾರಿಕೆಯಲ್ಲಿ ಹೆಚ್ಚು ತೊಡಗಿಸುವುದರಿಂದ ಅವರ ಆದಾಯ ಮಟ್ಟವನ್ನು ಹೆಚ್ಚಿಸಿ ಜಿಲ್ಲೆಯ ಆರ್ಥಿಕಾಭಿವೃದ್ದಿಗೆ ಕೈಜೋಡಿಸಿದಂತಾಗುತ್ತದೆ ಎಂದರು.

ಗಂಜಲು, ಸಗಣಿಯಿಂದ ಗೊಬ್ಬರ ತಯಾರಿಕೆಗೆ ಮುಂದಾಗಿ; ಜಾನುವಾರುಗಳ ಗಂಜಲು ಮತ್ತು ಸಗಣಿಯಿಂದ ಯೂರಿಯಾ ರೀತಿ ಗೊಬ್ಬರವನ್ನು ತಯಾರು ಮಾಡಿ ರೈತರಿಗೆ ನೀಡುವ ನಿಟ್ಟಿನಲ್ಲಿ ಸಂಶೋಧನೆ ಮಾಡಬೇಕು, ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಯೂರಿಯಾ ರೀತಿ ಉತ್ಪಾದನೆ ಮಾಡಿ ರೈತರು ಸುಲಭವಾಗಿ ಜಮೀನುಗಳಲ್ಲಿ ಹಾಕುವಂತಹ ಪದ್ದತಿಯಲ್ಲಿ ಉತ್ಪಾದನೆ ಮಾಡಿದಲ್ಲಿ ಹೆಚ್ಚು ಜನಪ್ರಿಯವಾಗಲಿದೆ ಎಂದರು.

ಸಭೆಯಲ್ಲಿ ಕಾಲುಬಾಯಿ ರೋಗದ ಕುರಿತಂತೆ ಮಾಹಿತಿಯುಳ್ಳ ಪೋಸ್ಟರ್ ಮತ್ತು ಕರಪತ್ತವನ್ನು ಬಿಡುಗಡೆ ಮಾಡಲಾಯಿತು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ; ಚಂದ್ರಶೇಖರ್ ಸುಂಕದ್ ಹಾಗೂ ವಿವಿಧ ತಾಲ್ಲೂಕುಗಳ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top