Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಬೃಹತ್ ಮೆರವಣಿಗೆಯೊಂದಿಗೆ ವಿನೋಬನಗರ ಗಣೇಶ ಮೂರ್ತಿ ವಿಸರ್ಜನೆ

IMG 20230925 205112

ದಾವಣಗೆರೆ

ದಾವಣಗೆರೆ: ನಾಳೆ ಬೃಹತ್ ಮೆರವಣಿಗೆಯೊಂದಿಗೆ ವಿನೋಬನಗರ ಗಣೇಶ ಮೂರ್ತಿ ವಿಸರ್ಜನೆ

ದಾವಣಗೆರೆ; ವಿನೋಬನಗರ ಶ್ರೀ ವೀರ ವರಸಿದ್ಧಿ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ 31ನೇ ವರ್ಷದ ಗಣೇಶ ಮೂರ್ತಿಯನ್ನು ನಾಳೆ (ಸೆ.26) ಬೃಹತ್ ಮೆರವಣಿಗೆ ಮೂಲಕ ವಿಸರ್ಜಿಸಲಾಗುವುದು ಎಂದು ಸಮಿತಿ ಕಾರ್ಯದರ್ಶಿ ಡಿ.ಕೆ. ರಮೇಶ್ ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು,ನಾಳೇ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ವಿನಾಯಕ ಮೂರ್ತಿಯನ್ನು ಪಿ.ಬಿ. ರಸ್ತೆ, ಅರುಣ ಸರ್ಕಲ್, ರಾಂ ಅಂಡ್ ಕೋಂ ಸರ್ಕಲ್, ಮುಖಾಂತರ 1 ನೇ ಮೇನ್ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ, ದೇವಸ್ಥಾನದ ಮೂಲಕವಾಗಿ ಪಿ.ಬಿ. ರಸ್ತೆಯ ಮುಖಾಂತರ ಬಾತಿಕೆರೆಯಲ್ಲಿ ವಿಸರ್ಜಿಸಲಾಗುವುದು ಎಂದರು.

ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದು, ಮೆರವಣಿಗೆ ವೇಳೆ ಮಸೀದಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಗಣೇಶ್ ಮೂರ್ತಿಗೆ ಪುಷ್ಪ ಮಾಲೆ ಸಲ್ಲಿಸುವರು ಎಂದು ತಿಳಿಸಿದರು. ಮೆರವಣಿಗೆಯಲ್ಲಿ ನಾಸಿಕ್ ಡೋಲು, ಡೊಳ್ಳು ಕುಣಿತ, ನಂದಿಕೋಲು, ವೀರಗಾಸೆ, ಸಮಾಳ ಸೇರಿದಂತೆ ವಿವಿಧ ಕಲಾತಂಡಗಳು, 2 ಡಿಜೆ ಗಳು ಪಾಲ್ಗೊಳ್ಳಲಿದೆ ಎಂದರು. ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ದೇವರಮನಿ ಶಿವರಾಜ್, ಅಧ್ಯಕ್ಷ ಗುರುನಾಥ್ ಬಾಬು, ಉಪಾಧ್ಯಕ್ಷ ನಾಗರಾಜ ಗೌಡ, ಸಹ ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.

 

ದಾವಣಗೆರೆ: ಹೊಸ ರಾಶಿ ಅಡಿಕೆ ದರ 46 ಸಾವಿರಕ್ಕೆ ಕುಸಿತ; ಹಳೆಯ ಅಡಿಕೆ ಬೆಲೆಯಲ್ಲಿಯೂ ಇಳಿಕೆ..!

 

ದಾವಣಗೆರೆ; ಸರ್ಕಾರಿ ಕಚೇರಿಗೆ ಅಲೆದಾಟ ತಪ್ಪಿಸಲು ಜನತಾ ದರ್ಶನ: ಭದ್ರಾ ನಾಲೆಯ ಕೊನೆ ಭಾಗದ 5 ಕೆರೆಗಳಿಗೆ ನೀರು ತುಂಬಿಸಲು ಯೋಜನೆ; ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top