ಸರಳವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ; ಮೆರವಣಿಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸರ್ಕಾರದ ಮಾರ್ಗಸೂಚಿ ಅನ್ವಯ ಈ ಬಾರಿಯ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ. 20 ರಂದು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸರಳ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವುದು. ಯಾವುದೇ ಮೆರವಣಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಈದ್‍ಮಿಲಾದ್ ಹಬ್ಬಗಳ ಆಚರಣೆ ಸಂಬಂಧ ಅ. 07 ರಂದು ಸರ್ಕಾರ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿಗಳನ್ವಯ ವಾಲ್ಮೀಕಿ ಜಯಂತಿ ಹಾಗೂ ಈದ್‍ಮಿಲಾದ್ ಆಚರಣೆಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಎಲ್ಲಾ ಮಹಾನ್ ಚೇತನರ ಆಚರಣೆಯನ್ನು ಕೋವಿಡ್ ಕಾರಣದಿಂದ ಜಿಲ್ಲಾಡಳಿತ ಭವನದಲ್ಲಿಯೇ ಆಚರಿಸಲಾಗುತ್ತಿದೆ ಎಂದರು.

ಅ.20 ರಂದು ನಡೆಯುವ ವಾಲ್ಮೀಕಿ ಜಯಂತಿ ಆಚರಣೆಯನ್ನು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸುವ ಜೊತೆಗೆ, ವಿಶೇಷ ಚಿಂತಕರಿಂದ ಅವರ ಜೀವನಚರಿತ್ರೆಯನ್ನು ಸಮಾಜಕ್ಕೆ ತಿಳಿಸುವಂತಹ ಕಾರ್ಯಕ್ರಮ ಏರ್ಪಡಿಸಲಾಗುವುದು, ಇದು ಎಲ್ಲರಿಗೂ ಪ್ರೇರಣೆಯಾಗಬೇಕು ಹಾಗೂ ಎಲ್ಲಾ ಸಮುದಾಯದವರು ಕಾರ್ಯಕ್ರಮಕ್ಕೆ ಹಾಜರಾಗಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸಾಮೂಹಿಕ ಮೆರವಣಿಗೆ ನಿಷೇಧ: ವಾಲ್ಮೀಕಿ ಜಯಂತಿ ಆಚರಣೆಯನ್ನು ಸರಳವಾಗಿ ಆಚರಿಸಬೇಕು ಹಾಗೂ ಯಾವುದೇ ಸಾಮೂಹಿಕ ಮೆರವಣಿಗೆಯನ್ನು ಮಾಡುವಂತಿಲ್ಲ ಮತ್ತು ಮಾಸ್ಕ್‍ನ್ನು ಕಡ್ಡಾಯವಾಗಿ ಧರಿಸಬೇಕು, ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ 100 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಸಾಮಾಜಿಕ ಅಂತರವನ್ನು ಪಾಲಿಸಬೇಕು, ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು ಅಥವಾ ಡಿಜಿಟಲ್ ಸೌಂಡ್ ಸಿಸ್ಟಂಗಳನ್ನು ಬಳಸುವಂತಿಲ್ಲ, 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಈಗಾಗಲೆ ಸರ್ಕಾರ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದ್ದು, ಇದರನ್ವಯ ಜಿಲ್ಲೆಯಲ್ಲಿಯೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸೋಣ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಸಭೆಯಲ್ಲಿ ನಿವೃತ್ತ ಉಪನ್ಯಾಸಕ ಎ.ಬಿ.ರಾಮಚಂದ್ರಪ್ಪ, ಸಮಾಜದ ಮುಖಂಡ ಆಂಜನೇಯ ಗುರೂಜಿ. ಮಲ್ಲಿಕಾರ್ಜುನ, ಅಣಜಿ ಅಂಜನಪ್ಪ, ವೀರಣ್ಣ, ಹಾಲೇಶಪ್ಪ, ವಿಜಯಲಕ್ಷ್ಮಿ ಮುಂತಾದವರು ಭಾಗವಹಿಸಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *