Connect with us

Dvgsuddi Kannada | online news portal | Kannada news online

ದಾವಣಗೆರೆ: ಸುಂಕದಕಟ್ಟೆ ನರಸಿಂಹಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ; 49.70 ಲಕ್ಷ‌ ಹಣ ಸಂಗ್ರಹ

IMG 20231006 131325

ದಾವಣಗೆರೆ

ದಾವಣಗೆರೆ: ಸುಂಕದಕಟ್ಟೆ ನರಸಿಂಹಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ; 49.70 ಲಕ್ಷ‌ ಹಣ ಸಂಗ್ರಹ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ನರಸಿಂಹಸ್ವಾಮಿ ಹಾಗೂ ಮಂಜುನಾಥ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲು 49.70 ಲಕ್ಷ ಹಣ ಸಂಗ್ರಹವಾಗಿದೆ. ಈ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ್ದಾಗಿದೆ.

ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಗುರುವಾರ ಹುಂಡಿಯನ್ನು ತೆರವುಗೊಳಿಸಿದ ಮುಜರಾಯಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಕೆನರಾ ಬ್ಯಾಂಕ್‌ ಸಿಬ್ಬಂದಿ ಹಣವನ್ನು ಎಣಿಕೆ ಮಾಡಿದರು ಎಂದು ತಹಶೀಲ್ದಾರ್ ಪಟ್ಟರಾಜ ಗೌಡ ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ನಡೆದ ಹುಂಡಿ ಹಣ ಎಣಿಕೆ ಕಾರ್ಯದಲ್ಲಿ 38 ಸಿಬ್ಬಂದಿ ಪಾಲ್ಗೊಂಡಿದ್ದರು.‌ಹುಂಡಿಯ ಹಣವನ್ನು ಕೆನರಾ ಬ್ಯಾಂಕ್‌ನಲ್ಲಿರುವ ದೇವಸ್ಥಾನದ ಖಾತೆಗೆ ಜಮಾ ಮಾಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top