ದಾವಣಗೆರೆ: ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ ಪಡಿತರ ಅಕ್ಕಿಯನ್ನು ನಾಳೆ ಬಹಿರಂಗ ಹರಾಜು ನಡೆಸಲಾಗುವುದು.
ನಗರದ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪ ನಿರೀಕ್ಷಕರು ಮತ್ತು ಹದಡಿ ಗ್ರಾಮಾಂತರ ಪೊಲೀಸ್ ಠಾಣೆ ಇವರ ಜಂಟಿ ಕಾರ್ಯಾಚರಣೆಯಲ್ಲಿ ಮೇ.5 ರಂದು ಹೆಚ್ ಕಲ್ಪಪನಹಳ್ಳಿ ಬಳಿ 347.95 ಕ್ವಿಂಟಾಲ್ ಅಕ್ಕಿಆ.15 ರಂದು ಹೊಸನಾಯ್ಕನಹಳ್ಳಿ ಗ್ರಾಮದ ಬಳಿ 1.78 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯನ್ನು ನ.17 ರಂದು ಬೆಳಿಗ್ಗೆ 10.30ಕ್ಕೆ ಟಿ.ಎ.ಪಿ.ಸಿ.ಎಂ.ಎಸ್(ಲಿ.) ಗ್ರಾಮಾಂತರ ಸಗಟು ಮಳಿಗೆ, ಎ.ಪಿ.ಎಂ.ಸಿ ಯಾರ್ಡ್, ಡಿ-ಬ್ಲಾಕ್, ಎ.ಆರ್.ಸಿ ಗೋದಾಮು, ಎ.ಪಿ.ಎಂ.ಸಿ ಕಚೇರಿ ಹಿಂಭಾಗ ದಾವಣಗೆರೆ ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಹಾರ ಶಿರಸ್ತೇದಾರರು ಮೊ.ನಂ.9480065633 ಮತ್ತು ಆಹಾರ ನಿರೀಕ್ಷಕರು ಮೊ.ನಂ. 9353578169, 7411462337ಇವರನ್ನು ಸಂಪರ್ಕಿಸಲು ತಹಶೀಲ್ದಾರ್ ಡಾ.ಎಂ.ಬಿ ಅಶ್ವಥ್ ತಿಳಿಸಿದ್ದಾರೆ.



