ದಾವಣಗೆರೆ: ನಾಳೆ ವಿವಿಧ ಕಡೆ ಜಪ್ತಿ ಮಾಡಿದ 348 ಕ್ವಿಂಟಲ್ ಪಡಿತರ ಅಕ್ಕಿ ಬಹಿರಂಗ ಹರಾಜು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ‌ ಪಡಿತರ ಅಕ್ಕಿಯನ್ನು ನಾಳೆ ಬಹಿರಂಗ ಹರಾಜು ನಡೆಸಲಾಗುವುದು.

ನಗರದ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪ ನಿರೀಕ್ಷಕರು ಮತ್ತು ಹದಡಿ ಗ್ರಾಮಾಂತರ ಪೊಲೀಸ್ ಠಾಣೆ ಇವರ ಜಂಟಿ ಕಾರ್ಯಾಚರಣೆಯಲ್ಲಿ ಮೇ.5 ರಂದು ಹೆಚ್ ಕಲ್ಪಪನಹಳ್ಳಿ ಬಳಿ 347.95 ಕ್ವಿಂಟಾಲ್ ಅಕ್ಕಿಆ.15 ರಂದು ಹೊಸನಾಯ್ಕನಹಳ್ಳಿ ಗ್ರಾಮದ ಬಳಿ 1.78 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯನ್ನು ನ.17 ರಂದು ಬೆಳಿಗ್ಗೆ 10.30ಕ್ಕೆ ಟಿ.ಎ.ಪಿ.ಸಿ.ಎಂ.ಎಸ್(ಲಿ.) ಗ್ರಾಮಾಂತರ ಸಗಟು ಮಳಿಗೆ, ಎ.ಪಿ.ಎಂ.ಸಿ ಯಾರ್ಡ್, ಡಿ-ಬ್ಲಾಕ್, ಎ.ಆರ್.ಸಿ ಗೋದಾಮು, ಎ.ಪಿ.ಎಂ.ಸಿ ಕಚೇರಿ ಹಿಂಭಾಗ ದಾವಣಗೆರೆ ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆಹಾರ ಶಿರಸ್ತೇದಾರರು ಮೊ.ನಂ.9480065633 ಮತ್ತು ಆಹಾರ ನಿರೀಕ್ಷಕರು ಮೊ.ನಂ. 9353578169, 7411462337ಇವರನ್ನು ಸಂಪರ್ಕಿಸಲು ತಹಶೀಲ್ದಾರ್ ಡಾ.ಎಂ.ಬಿ ಅಶ್ವಥ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *