Connect with us

Dvgsuddi Kannada | online news portal | Kannada news online

ದಾವಣಗೆರೆ: ಡಾ. ಬಿ.ಆರ್. ಅಂಬೇಡ್ಕರ್ 67ನೇ ಮಹಾ ಪರಿನಿರ್ವಾಣ ದಿನಾಚರಣೆ

ದಾವಣಗೆರೆ

ದಾವಣಗೆರೆ: ಡಾ. ಬಿ.ಆರ್. ಅಂಬೇಡ್ಕರ್ 67ನೇ ಮಹಾ ಪರಿನಿರ್ವಾಣ ದಿನಾಚರಣೆ

ದಾವಣಗೆರೆ: ಡಾ. ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟಂತಹ ಸಂವಿಧಾನ ಮತ್ತು ತತ್ವ ಸಿದ್ದಾಂತಗಳು ಕೇವಲ ಒಂದು ದೇಶಕ್ಕೆ ಸೀಮಿತವಾಗದೇ ಇಡೀ ವಿಶ್ವಕ್ಜೆ ಮಾದರಿ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 67ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಡಾ.ಬಿ.ಆರ್ ಅಂಬೇಡ್ಕರ್ ಅವರು ನಮ್ಮ ದೇಶ ಕಂಡ ಮಹಾನ್ ಸಾಮಾಜಿಕ ಪರಿವರ್ತಕ, ಆರ್ಥಿಕ ಶಾಸ್ತ್ರಜ್ಞರಾಗಿದ್ದು, ಅವರು ರಚಿಸಿದಂತಹ ಸಂವಿಧಾನದಿಂದ ರಾಜಕೀಯ, ಸಾಮಾಜಿಕ ಸ್ವಾತಂತ್ರ್ಯವನ್ನು ಹೊಂದಲು ಸಾಧ್ಯವಾಗಿದೆ ಎಂದರು.

ಅಂಬೇಡ್ಕರ್‍ ಚಿಕ್ಕ ವಯಸ್ಸಿನಲ್ಲಿಯೇ ಶ್ರೇಣೀಕೃತ ಸಮಾಜದಲ್ಲಿ ಅನುಭವಿಸಿದ ಸಂಕಷ್ಟ, ಶೋಷಣೆ ಹಾಗೂ ಮೌಢ್ಯಗಳ ವ್ಯವಸ್ಥೆಯನ್ನು ಸಾಮಾಜಿಕವಾಗಿ ಬದಲಾವಣೆ ಮಾಡಬೇಕು ಮತ್ತು ಸಮಾಜದ ಕಟ್ಟಕಡೆಯ ಸಮುದಾಯವಾಗಿ ಜೀವನ ನಡೆಸುತ್ತಿದ್ದ ದಲಿತರಿಗೂ ಸಹ ಪರಿಪೂರ್ಣವಾದಂತಹ ಜೀವನ ಅವಕಾಶವನ್ನು ಒದಗಿಸಿಕೊಡಲು ಹಗಲು ರಾತ್ರಿ ಕಷ್ಟಪಟ್ಟು ಭಾರತಕ್ಕೆ ವಿಶಾಲವಾದಂತಹ ಸಂವಿಧಾನವನ್ನು ರಚಿಸಿ ಕೊಟ್ಟರು.

ಈ ಸಂವಿಧಾನದಲ್ಲಿ ಬಸವ ತತ್ವವಿದೆ, ಕೀರ್ತನಕಾರರ ಎಲ್ಲಾ ರೀತಿಯ ವಿಚಾರಧಾರೆಗಳೂ ಅಡಕವಾಗಿದೆ.ಹಾಗೆಯೇ ಪ್ರತಿಯೊಬ್ಬರಿಗೂ ಕಾನೂನಿನಲ್ಲಿ ಸಮಾನ ಅವಕಾಶ ನೀಡಿದ್ದು, ಈ ಅವಕಾಶದಿಂದಲೇ ಇಂದು ಒಬ್ಬ ಮಹಿಳೆ ದೇಶದ ರಾಷ್ಟ್ರಪತಿಯಾಗಲು ಸಾಧ್ಯವಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್.ಬಿ.ಇಟ್ನಾಳ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್.ಕೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top