Connect with us

Dvgsuddi Kannada | online news portal | Kannada news online

ಪಂಡಿತಾರಾಧ್ಯ ಶ್ರೀಗೆ ಡಾ. ಎಂ ಎಂ ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ

IMG 20240130 163128

ದಾವಣಗೆರೆ

ಪಂಡಿತಾರಾಧ್ಯ ಶ್ರೀಗೆ ಡಾ. ಎಂ ಎಂ ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ

ದಾವಣಗೆರೆ: ತರಳಬಾಳು ಶಾಖಾ ಮಠದ ಸಾಣೇಹಳ್ಳಿಯ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಈ ಬಾರಿಯ ಡಾ. ಎಂ ಎಂ ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ ಲಭಿಸಿದೆ.

ಬಸವ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ವತಿಯಿಂದ ಶ್ರೀಗಳ ಸಾಮಾಜಿಕ ಸೇವೆ, ಮೌಡ್ಯತೆ ವಿರುದ್ಧದ ಹೋರಾಟ ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕಹೊಂದಿದೆ. ಫೆ.6ರಂದು ಬೆಳಗ್ಗೆ 11.30 ಕ್ಕೆ ಧಾರವಾಡ ನಗರದ ಕಲ್ಯಾಣ ನಗರ ಬಡಾವಣೆಯ ಮಜ್ಜಿಗೆ ಪಂಚಪ್ಪಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಗದುಗಿನ ತೋಂಟದಾರ್ಯ ಮಠದ ಜಗದ್ಗುರು ತೋಂಟದ ಸಿದ್ಧರಾಮ ಮಹಾಸ್ವಾಮೀಜಿ ನೇತೃತ್ವದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚಿಂತಕ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಬಸವ ಅಂತರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಎಸ್ ಮಹಾದೇವಯ್ಯ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾವಳ್ಳಿ ಶಂಕರ್‌, ಶಶಿಧರ್ ಲೋಡಕರ್, ಬಿ ಎಲ್ ಪಾಟೀಲ್ ಭಾಗವಹಿಸಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top