ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಫೆ.1 ರಂದು ಬೆಳಿಗ್ಗೆ 11.30 ಕ್ಕೆ ನಗರದ ಬಾಪೂಜಿ ಪಾಲಿಟೆಕ್ನಿಕ್ ಸೆಮಿನಾರ್ ಹಾಲ್ನಲ್ಲಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಲೀಡ್ ಬ್ಯಾಂಕ್ನ ಜಿಲ್ಲಾ ವ್ಯವಸ್ಥಾಪಕರಾದ ಪ್ರಕಾಶ್ ಜಿ.ಸಿ. ಉದ್ಘಾಟಿಸುವರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ರಾಜೇಂದ್ರ ನಾಮದೇವ ಕದಂ ಅಧ್ಯಕ್ಷತೆ ವಹಿಸುವರು. ಸಿಡಾಕ್ ಜಂಟಿ ನಿರ್ದೇಶಕರಾದ ಆರ್.ಪಿ.ಪಾಟೀಲ್ ಪ್ರಾಸ್ತಾವಿಕ ನುಡಿಗಳಾನ್ನಾಡುವರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ನಾಗರಾಜ್ ಕೆ ಉಪಸ್ಥಿತರಿರುವರು.



