Connect with us

Dvgsuddi Kannada | online news portal | Kannada news online

ದಾವಣಗೆರೆ: ಬಿಸಿಲಿನ ತಾಪ ಹೆಚ್ಚಳ; ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

ದಾವಣಗೆರೆ

ದಾವಣಗೆರೆ: ಬಿಸಿಲಿನ ತಾಪ ಹೆಚ್ಚಳ; ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

ದಾವಣಗೆರೆ: ಜಿಲ್ಲೆಯಲ್ಲಿ ಬರ, ಬಿಸಿಲಿನ ತಾಪಮಾನ ಹೆಚ್ಚಳ. ಮತ್ತೊಂದೆಡೆ ಎಲ್ಲ ಕಡೆ ನೀರಿನ ಅಭಾವ ಉಂಟಾಗಿದೆ. ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ. ಹೀಗಾಗಿ ಪಕ್ಷಿಗಳಿ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು ಶೇಖರಣೆ ಮಾಡಿಡಲು ಹಾಗೂ ನೀರು ಕಡಿಮೆಯಾಗಂತೆ ದಿನನಿತ್ಯ ನೀರು ಹಾಕುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಈ ವರ್ಷ ತೀವ್ರ ಬರದ ವಾತಾವರಣ ನಿರ್ಮಾಣವಾಗಿದೆ. ಬೆಳೆಗಳಿಗೆ ಇರಲಿ, ಕುಡಿಯುವುದಕ್ಕೂ ನೀರಿನ ಕೊರತೆ ಉಂಟಾಗಿದೆ. ಸರ್ಕಾರಿ ಕಟ್ಟಡಗಳಲ್ಲಿಯೂ ನೀರಿನ ಅಭಾವ ಉಂಟಾಗಿದೆ. ಪಕ್ಷಿಗಳಿಗೆ ನೀರಿನ ಒದಗಿಸಲು ಜಿಲ್ಲಾಧಿಕಾರಿ ಈ ಆದೇಶ ಮಾಡಿದ್ದಾರೆ. ಇದು ಕೇವಲ ಸರ್ಕಾರಿ ಕಚೇರಿ‌ಗಳಿಗೆ ಸೀಮಿತವಾಗದೇ ಸಾರ್ವಜನಿಕರೂ ಸ್ವಯಂ ಪ್ರೇರಣೆಯಿಂದ ತಮ್ಮ ತಮ್ಮ ಮನೆ‌ಯ ಮಹಡಿ ಮೇಲೆ ಮಡಿಕೆ, ಪಾತ್ರೆಗಳಲ್ಲಿ ನೀರು ತುಂಬಿ‌ಸಿಡಬೇಕಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top