Connect with us

Dvgsuddi Kannada | online news portal | Kannada news online

ದಾವಣಗೆರೆ: ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುವುದು, ಶಾಲೆಗೆ ಗೈರು, ರಾಜಕೀಯ ಪಕ್ಷಗಳ ಜತೆ ಗುರುತಿಸಿಕೊಂಡ ಶಿಕ್ಷಕ ಅಮಾನತು ಮಾಡಿ ಡಿಸಿ ಆದೇಶ

ದಾವಣಗೆರೆ

ದಾವಣಗೆರೆ: ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುವುದು, ಶಾಲೆಗೆ ಗೈರು, ರಾಜಕೀಯ ಪಕ್ಷಗಳ ಜತೆ ಗುರುತಿಸಿಕೊಂಡ ಶಿಕ್ಷಕ ಅಮಾನತು ಮಾಡಿ ಡಿಸಿ ಆದೇಶ

ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಆಂಜನೇಯನಾಯ್ಕ ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುವುದು, ಶಾಲೆಗೆ ಗೈರು, ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡ ಹಿನ್ನೆಲೆ ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

ಶಿಕ್ಷಕರಾಗಿ ಜಾತಿ, ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುವುದು, ಶಾಲೆಗೆ ಗೈರು ಹಾಜರಾಗುವುದು ಮತ್ತು ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಳ್ಳುವುದು ಹಾಗೂ ಬೇರೆ ಶಿಕ್ಷಕರ ಮೇಲೆ ಒತ್ತಡ ಹೇರುವುದನ್ನು ಪ್ರವೃತ್ತಿ ಮಾಡಿಕೊಂಡಿದ್ದರು. ಈ ಬಗ್ಗೆ ಇವರ ಮೇಲೆ ಸಾರ್ವಜನಿಕರು ದೂರು ನೀಡಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಬೇರೆ ತಾಲ್ಲೂಕುಗಳಿಗೆ ವರ್ಗಾವಣೆ ಮಾಡುವಂತೆ ದೂರು ಸಲ್ಲಿಸಿದ್ದರು.

ಈ ಶಿಕ್ಷಕರ ಮೇಲೆ ಜಗಳೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ. ಇವರ ನಡತೆ ಕುರಿತಂತೆ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವರದಿ ಸಲ್ಲಿಕೆಯಾಗಿರುತ್ತದೆ. ಇವರು ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮಾವಳಿಗೆ ವಿರುದ್ದವಾಗಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top