ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದ ನಾಲ್ಕು ತಿಂಗಳ ಗಂಡು ಮಗು ದತ್ತು ನೀಡಿದ ಜಿಲ್ಲಾಧಿಕಾರಿ ಡಾ; ವೆಂಕಟೇಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಳೆದ 16 ವರ್ಷದಿಂದ ಮಕ್ಕಳಿಲ್ಲದೆ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿಗಳು ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ 4 ತಿಂಗಳ ಮಗುವನ್ನು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಮೂಲಕ ದತ್ತು ಪಡೆದಿದರು.

ಮಕ್ಕಳಿಲ್ಲದವರು ಮತ್ತು ಮಕ್ಕಳನ್ನು ಸಾಕಲು ಸಾಕಬಯಸುವ ಪೋಷಕರು ಮಕ್ಕಳನ್ನು ದತ್ತು ಪಡೆಯಲು ಅವಕಾಶ ಇರುತ್ತದೆ. ಪ್ರತಿಯೊಂದು ಜಿಲ್ಲೆಯಲ್ಲಿ ದತ್ತು ಸ್ವೀಕಾರ ಕೇಂದ್ರಗಳಿರುತ್ತವೆ. ಅನಾಥವಾಗಿರುವ ಮಗು, ಮಗು ಬೇಡವಾದ ದಂಪತಿಗಳಿಂದ ಮಗು ಸ್ವೀಕಾರ, ಮಗು ಪೋಷಣೆ ಮಾಡಲು ಸಾಧ್ಯವಾಗದವರಿಂದ ಮಗುವನ್ನು ಈ ಕೇಂದ್ರದಲ್ಲಿ ಪಡೆಯಲಾಗುತ್ತದೆ. ಈ ಮಗುವನ್ನು ಇಲ್ಲಿ ಪಾಲನೆ ಪೋಷಣೆ ಮಾಡಿ ಮಗುವಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಸರ್ಕಾರದಿಂದ ಕಲ್ಪಿಸಿ ಮಗುವನ್ನು ಪಾಲನೆ, ಪೋಷಣೆ ಮಾಡಲಾಗುತ್ತದೆ.

ದತ್ತು ಸ್ವೀಕಾರದಲ್ಲಿನ ಮಗುವನ್ನು ಬೇರೆ ಪೋಷಕರು ದತ್ತು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ನಿಯಮಗಳಿರುತ್ತವೆ. ಮಗು ಬೇಕಾದವರು ಸೆಂಟ್ರಲ್ ಅಡಾಪ್ಷನ್ ರೀಸೋರ್ಸ್ ಅಥಾರಿಟಿ ಮತ್ತು ಸ್ಟೇಟ್ ಅಡಾಪ್ಷನ್ ರೀಸೋರ್ಸ್ ಅಥಾರಿಟಿ ವೆಬ್‍ಸೈಟ್‍ನಲ್ಲಿ ನೊಂದಣಿ ಮಾಡಿಸಬೇಕು. ಮಕ್ಕಳಿಲ್ಲದ ಪೋಷಕರು ಮಗು ದತ್ತು ಪಡೆಯಲು ನೊಂದಣಿ ನಂತರ ದಂಪತಿಗಳಿಬ್ಬರ ವಯೋಮಾನದ ಆಧಾರದ ಮೇಲೆ ಯಾವ ವಯಸ್ಸಿನ ಮಗು ದತ್ತು ಪಡೆಯಬಹುದೆಂದು ಮ್ಯಾಚ್ ಮಾಡಲಾಗುತ್ತದೆ. ಅವರ ವಯೋಮಾನ ಮತ್ತು ಷರತ್ತುಗಳನ್ನು ಪೂರೈಸಿದ ಪೋಷಕರಿಗೆ ಮಗು ದತ್ತು ನೀಡಲು ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ.

ಇಂದು ದತ್ತು ಪಡೆದ ದಂಪತಿಗಳು ವಿವಾಹವಾಗಿ 16 ವರ್ಷಗಳಿಂದ ಮಕ್ಕಳಿರಲಿಲ್ಲ, ಇವರು ಸುಮಾರು 40-45 ವರ್ಷದ ವಯೋಮಾನದ ಪೋಷಕರಾಗಿರುವರು. ಇವರಿಗೆ ನಾಲ್ಕು ತಿಂಗಳ ಮಗು ಮ್ಯಾಚ್ ಆಗಿದ್ದರಿಂದ ದತ್ತು ನೀಡಲಾಗಿದೆ. ಇವರು ಕಳೆದ 3 ವರ್ಷಗಳಿಂದ ನೊಂದಣಿ ಮಾಡಿಸಿ ದತ್ತು ಪಡೆಯಲು ಕಾಯುತ್ತಿದ್ದರು. ಪೋಷಕರು ದತ್ತು ಸ್ವೀಕರಿಸಿದ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ.ಟಿ, ಮಕ್ಕಳ ರಕ್ಷಣಾಧಿಕಾರಿ ಚಂದ್ರಶೇಖರ್, ಅಧೀಕ್ಷಕರಾದ ಲತಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *