Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಶೇಷಚೇತನ, ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನ

govt

ಪ್ರಮುಖ ಸುದ್ದಿ

ದಾವಣಗೆರೆ: ವಿಶೇಷಚೇತನ, ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನ

ದಾವಣಗೆರೆ; ಕೇಂದ್ರ ಸರ್ಕಾರದ ಅಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಮೌಲ್ಯಮಾಪನ ತಪಾಸಣಾ ಶಿಬಿರಕ್ಕೆ ಹಾಜರಾಗವುದಕ್ಕಾಗಿ ಅಲಿಮ್ಕೋ ಸಂಸ್ಥೆ, ಕಾವೇರಮ್ಮ ಸರ್ಕಾರಿ ಶಾಲೆ ಆವರಣ ಕೆ.ಬಿ ಬಡಾವಣೆ, ದಾವಣಗೆರೆ ಇಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ನೋಂದಾಯಿಸಲು ಸಲ್ಲಿಸಬೇಕಾದ ದಾಖಲೆಗಳು: ವಿಕಲಚೇತನರಿಗೆ (ಅಡಿಪ್ ಯೋಜನೆಯಡಿ) ಯು.ಡಿ.ಐ.ಡಿ ಕಾರ್ಡ್ ಮತ್ತು ಸರ್ಟಿಫಿಕೇಟ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬಿ.ಪಿ.ಎಲ್ ರೇಷನ್ ಕಾರ್ಡ್, ಪಾಸ್‍ಫೋರ್ಟ್ ಸೈಜ್ ಪೋಟೋ
ಹಿರಿಯ ನಾಗರಿಕರಿಗೆ ವಯೋಶ್ರೀ ಯೋಜನೆಯಡಿ: ಆಧಾರ್ ಕಾರ್ಡ್, ವಯಸ್ಸಿನ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ, ಬಿ.ಪಿ.ಎಲ್. ರೇಷನ್ ಕಾರ್ಡ್, ಪಾಸ್‍ಪೋರ್ಟ್ ಸೈಜ್ ಫೋಟೋ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9793694269, 08192-295442 ನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top