ದಾವಣಗೆರೆ: ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ 2024-25ನೇ ಸಾಲಿನ ರಾಜ್ಯದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಐಟಿಐ, ಡಿಪ್ಲೊಮಾ, ಪದವಿ, ವೃತ್ತಿ ಶಿಕ್ಷಣ ಕೋರ್ಸ್, ಕಾನೂನು ಪದವಿ, ಮ್ಯಾನೇಜ್ಮೆಂಟ್ ಮತ್ತು ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ 2024-25ರ ಶೈಕ್ಷಣಿಕ ಅವಧಿಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಆಯಾ ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿವೇತನ ನೀಡಲಾಗುವುದು.
ವಿದ್ಯಾರ್ಥಿವೇತನವನ್ನು ನಿರೀಕ್ಷಿಸುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾನ್ವಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಶಾಲೆ- ಕಾಲೇಜುಗಳ ಮುಖ್ಯಸ್ಥರ ಮೂಲಕ ಪ್ರಮಾಣಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಮತ್ತು ವಿವರಗಳಿಗಾಗಿ ಟ್ರಸ್ಟ್ನ ವೆಬ್ಸೈಟ್ www.ssjanakalyantrust.org ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ಕಡೆಯ ದಿನ ಎಂದು ಟ್ರಸ್ಟ್ ಕಾರ್ಯದರ್ಶಿ ಅಥಣಿ ವೀರಣ್ಣ ಪ್ರಕಟಣೆ ಮೂಲಕ ತಿಳಿಸಿದ್ದಾರೆ.



