Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಜಿಲ್ಲಾ ಲೀಡ್ ಬ್ಯಾಂಕ್‍ ನಿಂದ ಸಾಲ ಸಂಪರ್ಕ ಕಾರ್ಯಕ್ರಮ

ದಾವಣಗೆರೆ

ದಾವಣಗೆರೆ: ನಾಳೆ ಜಿಲ್ಲಾ ಲೀಡ್ ಬ್ಯಾಂಕ್‍ ನಿಂದ ಸಾಲ ಸಂಪರ್ಕ ಕಾರ್ಯಕ್ರಮ

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ ಆರ್ಥಿಕ ವ್ಯವಹಾರಗಳನ್ನು ಗಣನೀಯವಾಗಿ ಹೆಚ್ಚಿಸಲು ಹಾಗೂ ಗ್ರಾಹಕರಿಗೆ ಆರ್ಥಿಕ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಹಣಕಾಸು ಸೇವೆಗಳ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ನಿರ್ದೇಶನದ ಮೇರೆಗೆ ನಾಳೆ (ಅ.27) ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ನಗರದ ತೊಗಟವೀರ ಸಮದಾಯ ಭವನದಲ್ಲಿ ‘ಸಾಲ ಸಂಪರ್ಕ ಕಾರ್ಯಕ್ರಮ’ ಆಯೋಜಿಸಲಾಗಿದೆ.

ಸಾಲ ಸಂಪರ್ಕ ಕಾರ್ಯಕ್ರಮವನ್ನು ಸಂಸದ ಜಿ.ಎ.ಸಿದ್ದೇಶ್ವರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್, ಕೆನರಾ ಬ್ಯಾಂಕ್ ಕ್ಷೇತ್ರಿಯ ಕಾರ್ಯಾಲಯದ ಸಹಾಯಕ ಮಹಾಪ್ರಬಂಧಕ ಹೆಚ್.ರಘುರಾಜ, ನಬಾರ್ಡ್‍ನ ಜಿಲ್ಲಾ ವ್ಯವಸ್ಥಾಪಕ ವಿ.ರವೀಂದ್ರ ಹಾಗೂ ಪ್ರಮುಖ ಬ್ಯಾಂಕುಗಳ ಉನ್ನತ ಅಧಿಕಾರಿಗಳು ಭಾಗವಹಿಸುವರು.

ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಪ್ರಮುಖ ಬ್ಯಾಂಕುಗಳು ಮತ್ತು ನಬಾರ್ಡ್ ಪಾಲ್ಗೊಂಡು ಗ್ರಾಹಕರಿಗೆ ವಿವಿಧ ಸಾಲ ಸೌಲಭ್ಯಗಳು ಮತ್ತು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿ ಸಾಲವನ್ನು ಪಡೆಯಲು ಅನುಸರಿಸಬೇಕಾದ ವಿಧಾನಗಳ ಕುರಿತು ಮಾರ್ಗದರ್ಶನ ನೀಡಲಾಗುವುದು. ಹಾಗೂ ಸಣ್ಣ, ಮದ್ಯಮ, ಅತಿ ಸಣ್ಣ ಉದ್ಯಮಿಗಳಿಗೆ ಸಾಲ, ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ, ಕೃಷಿ ಸಾಲ, ಸ್ತ್ರೀಶಕ್ತಿ ಸಂಘಗಳಿಗೆ ಮತ್ತು ಸ್ವಸಹಾಯ ಗುಂಪುಗಳಿಗೆ ನೀಡುವ ಸಾಲ ಯೋಜನೆಗಳಿಗೆ ಒತ್ತು ನೀಡಿ ಅರ್ಹ ಅರ್ಜಿದಾರರಿಗೆ ಶೀಘ್ರ ಸಾಲ ಮಂಜೂರಾತಿ ನೀಡುವ ಗುರಿ ಹೊಂದಲಾಗಿದ್ದು, ಸಾರ್ವಜನಿಕರು ಮತ್ತು ಬ್ಯಾಂಕ್ ಗ್ರಾಹಕರು ಕಾರ್ಯಕ್ರಮದ ಪ್ರಯೋಜನ ಪಡೆಯಬೇಕೆಂದು ಲೀಡ್ ಬ್ಯಾಂಕ್‍ನ ವಿಭಾಗೀಯ ಪ್ರಬಂಧಕ ಸುಶ್ರುತ್ ಡಿ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top