ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ನಾಳೆ(ಜುಲೈ 11) ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜು.11 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಆಗಮಿಸಲಿದ್ದಾರೆ. ನಂತರ 10.30 ಕ್ಕೆ ನಗರದ ಬಿ.ಐ.ಇ.ಟಿ, ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕøತಿಕ ಕೇಂದ್ರದಲ್ಲಿ ನಡೆಯಲಿರುವ ವಿಶ್ವ ಜನಸಂಖ್ಯಾ ದಿನ-2024 ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಮಧ್ಯಾಹ್ನ 12.30 ಕ್ಕೆ ಆರೋಗ್ಯ ಇಲಾಖಾ ವ್ಯಾಪ್ತಿಯ ಆಸ್ಪತ್ರೆಗಳಿಗೆ ಭೇಟಿ ಮತ್ತು ಪರಿಶೀಲನೆ ಮಾಡುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ರಾತ್ರಿ 8 ಗಂಟೆಗೆ ಬೆಂಗಳೂರುಗೆ ಪ್ರಯಾಣಿಸುವರು.



