Connect with us

Dvgsuddi Kannada | online news portal | Kannada news online

ತುಂಗಭದ್ರಾ ನದಿ ಪ್ರವಾಹ ನಿರೀಕ್ಷೆ; ಹೊನ್ನಾಳಿಯಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ತುರ್ತು ಸೇವೆ ಘಟಕದಿಂದ ಅಣಕು ಪ್ರದರ್ಶನ

ದಾವಣಗೆರೆ

ತುಂಗಭದ್ರಾ ನದಿ ಪ್ರವಾಹ ನಿರೀಕ್ಷೆ; ಹೊನ್ನಾಳಿಯಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ತುರ್ತು ಸೇವೆ ಘಟಕದಿಂದ ಅಣಕು ಪ್ರದರ್ಶನ

ದಾವಣಗೆರೆ: ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿ ನೀರು ಹೆಚ್ಚಾಗಿವ ನಿರೀಕ್ಷೆ ಇದ್ದು, ನದಿ ಪಾತ್ರದಲ್ಲಿ ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶದ ಜನ, ಜಾನುವಾರುಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಮತ್ತು ತುರ್ತು ಸೇವಾ ಉಪಕರಣಗಳನ್ನು ಸನ್ನದ್ದವಾಗಿಸಲು ಅಣಕು ರಕ್ಷಣಾ ಕಾರ್ಯ ಅಣುಕು ಪ್ರದೇಶನ ನಡೆಸಲಾಯಿತು.

ಹೊನ್ನಾಳಿಯ ರಾಜಘಾಟ್ ಬಳಿ ಅಣಕು ಪ್ರದರ್ಶನ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪ್ರಕೃತಿ ವಿಕೋಪದಿಂದುಂಟಾಗುವ ಪರಿಸ್ಥಿತಿ ಎದುರಿಸಲು ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದರು. ಜಿಲ್ಲೆಯಲ್ಲಿ 2024 ರ ಜನವರಿಯಿಂದ ಜುಲೈ 23 ರ ವರೆಗೆ 263 ಮಿ.ಮೀ ವಾಡಿಕೆಗೆ 371 ಮಿ.ಮೀ ಮಳೆಯಾಗಿದೆ. ಆದರೆ ಮಲೆನಾಡಿನ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಾ ನದಿಯಿಂದ ನೀರು ಬರುತ್ತಿದ್ದು ಜುಲೈ 20 ರಂದು 96 ಸಾವಿರ ಕ್ಯೂಸೆಕ್ಸ್ ವರೆಗೆ ನದಿಯ ಮಟ್ಟ ತಲುಪಿತ್ತು. ಜುಲೈ 23 ರಂದು 33686 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು ಭದ್ರಾ ಜಲಾಶಯದಲ್ಲಿ 168.2 ಅಡಿ ನೀರಿನ ಮಟ್ಟ ಇದ್ದು ಇದು ಭರ್ತಿಯಾಗಲು ಇನ್ನೂ 19.8 ಅಡಿ ನೀರು ಬರಬೇಕಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗಬಹುದಾಗಿದ್ದು ಭದ್ರಾ ಜಲಾಶಯ ಭರ್ತಿಯಾದಲ್ಲಿ ನದಿಯಲ್ಲಿ ಹೆಚ್ಚಿನ ನೀರಿನ ಹರಿವು ಉಂಟಾಗಲಿದೆ. ಇದರಿಂದ ಕೆಲವು ಕಡೆ ಜನರಿಗೆ ಸಮಸ್ಯೆಯಾಗಲಿದೆ ಎಂದರು.

ಹೊನ್ನಾಳಿಯ ರಾಜ್‌ಘಾಟ್ ಹಾಗೂ ಬಂಬೂ ಬಜಾರ್ ಬಳಿ 28 ಕುಟುಂಬಗಳ 125 ಜನರಿಗೆ ಕಾಳಜಿ ಕೇಂದ್ರವನ್ನು ಅಂಬೇಡ್ಕರ್ ಭವನದಲ್ಲಿ ಪ್ರಾರಂಭಿಸಲು, ಹರಿಹರದ ಗಂಗಾನಗರ ಮತ್ತು ಬೆಂಕಿ ನಗರದಲ್ಲಿ 16 ಕುಟುಂಬಗಳ 64 ಜನರಿಗಾಗಿ ಎಪಿಎಂಸಿ ಭವನದಲ್ಲಿ ಮತ್ತು ತೀವ್ರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ತೊಂದರೆಯಾಗುವ ಗ್ರಾಮಗಳ ಕುಟುಂಬಗಳನ್ನು ಗುರುತಿಸಿ ಮುಂಜಾಗ್ರತೆಯಾಗಿ ಎಲ್ಲೆಲ್ಲಿ ಕಾಳಜಿ ಕೇಂದ್ರಗಳನ್ನು ತಾತ್ಕಾಲಿಕವಾಗಿ ತೆರೆಯಬಹುದೆಂದು ಗುರುತು ಮಾಡಲಾಗಿದೆ ಎಂದರು.

ತುರ್ತು ಪರಿಹಾರ; ಮಳೆಯಿಂದ ಮನೆ ಹಾನಿಯಾದಲ್ಲಿ ಪೂರ್ಣ ಹಾನಿಯಾದರೆ ರೂ.1.20 ಲಕ್ಷ, ಹಾನಿ, ಭಾಗಶಃ ಹಾನಿಯಾದಲ್ಲಿ 6 ಸಾವಿರ ಮತ್ತು 4500 ಮತ್ತು ತುರ್ತು ಪರಿಹಾರವಾಗಿ ರೂ.2500 ಗಳ ಪರಿಹಾರ ನೀಡಲಾಗುತ್ತದೆ. ಇಲ್ಲಿಯವರೆಗೆ 91 ಮನೆಗಳಿಗೆ ಭಾಗಶಃ ಹಾನಿ ಹಾಗೂ 3 ಮನೆಗಳಿಗೆ ಪೂರ್ಣ ಹಾನಿ ಪರಿಹಾರ ವಿತರಣೆ ಮಾಡಲಾಗಿದೆ. ಮಳೆಯಿಂದ ಬೆಳೆಗಳಿಗೆ ಹಾನಿಯಾದಲ್ಲಿ ತಕ್ಷಣವೇ ಕಂದಾಯ ಇಲಾಖೆ ಹಾಗೂ ಕೃಷಿ, ತೋಟಗಾರಿಕೆ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಿ ನಷ್ಟದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದರು.

ಶಾಲೆ, ಅಂಗನವಾಡಿ ಸೋರುವಿಕೆ ತಡೆಗೆ ಕ್ರಮ; ಮಳೆಯಿಂದ ಶಾಲಾ ಮತ್ತು ಅಂಗನವಾಡಿ ಕೇಂದ್ರಗಳ ಛಾವಣಿ ಸೋರುತ್ತಿದ್ದಲ್ಲಿ ತಾತ್ಕಾಲಿಕವಾಗಿ ಪ್ಲಾಸ್ಟಿಕ್ ಹೊದಿಕೆಯನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಮಳೆ ಬಂದಾಗ ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರ ಅಥವಾ ತಕ್ಷಣ ದುರಸ್ಥಿಗೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದರು.
ಆರೋಗ್ಯ, ನೈರ್ಮಲ್ಯಕ್ಕೆ ಸೂಚನೆ; ಮಳೆಯಿಂದ ಹೊಸ ನೀರು ಬರಬಹುದು, ಇಂತಹ ಸಂದರ್ಭದಲ್ಲಿ ಶುದ್ದ ಕುಡಿಯುವ ನೀರು ಅಥವಾ ಕಾಯಿಸಿದ ನೀರನ್ನು ಮಾತ್ರ ಬಳಕೆ ಮಾಡಬೇಕು. ಮತ್ತು ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಳೆ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಮತ್ತು ಆರೋಗ್ಯ ಇಲಾಖೆಯಿಂದ ಆಸ್ಪತ್ರೆಗಳಲ್ಲಿ ಔಷಧ ದಾಸ್ತಾನಿಟ್ಟು ಜನರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ತಿಳಿಸಿ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಿಂದ ಸ್ವಚ್ಚತೆ ಕಾಪಾಡಲು ಮತ್ತು ಜನರಿಗೆ ಜಾಗೃತಿ ಮೂಡಿಸಲು ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top