ದಾವಣಗೆರೆ: ಹರಿಹರ ತಾಲೂಕಿನ ಬಹು ದಿನಗಳ ಬೇಡಿಕೆಯಾದ ಬೈರನಪಾದ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2.15 ಕೋಟಿ ಅನುದಾನ ಅನುಮೋದನೆ ನೀಡಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ವಾಗ್ದಾನ ನೀಡಿದಂತೆ ಈ ಯೋಜನೆಗೆ 2.15 ಕೋಟಿ ಮೊತ್ತದ ಕಾಮಗಾರಿಗೆ ಅನುಮೋದನೆ ನೀಡಿದ್ದಕ್ಕೆ ಇಂದು (ಜು.25) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜನ್ ನೇತೃತ್ವದಲ್ಲಿ ಸಿಎಂಗೆ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಯೋಜನೆ ಅನುಷ್ಠಾನ ಬಗ್ಗೆ ಚರ್ಚಿಸಿದ ತತಕ್ಷಣ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ , ಹರಿಹರ ತಾಲೂಕು ಕಾಂಗ್ರೆಸ್ ಮುಖಂಡ ಎನ್. ಹೆಚ್. ಶ್ರೀನಿವಾಸ್ ನಂದಿಗಾವಿ ಉಪಸ್ಥಿತರಿದ್ದರು.



