Connect with us

Dvgsuddi Kannada | online news portal | Kannada news online

ದಾವಣಗೆರೆ: ಮೇಕೆ ಹೊತ್ತೊಯ್ದ ಚಿರತೆ; ಆತಂಕದಲ್ಲಿ ಗ್ರಾಮಸ್ಥರು..!!!

ಹೊನ್ನಾಳಿ

ದಾವಣಗೆರೆ: ಮೇಕೆ ಹೊತ್ತೊಯ್ದ ಚಿರತೆ; ಆತಂಕದಲ್ಲಿ ಗ್ರಾಮಸ್ಥರು..!!!

ದಾವಣಗೆರೆ: ಜಮೀನಿನಲ್ಲಿದ್ದ ಕುರಿ ಹಿಂಡಿನಿಂದ ಮೇಕೆಯೊಂದನ್ನು ಚಿರತೆ ಹೊತ್ತೊಯ್ದಿದ್ದು, ಸುತ್ತಮಯತ್ತಲಿನ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ. ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ರಾಂಫುರದಲ್ಲಿ ಈ ಘಟನೆ ನಡೆದಿದೆ.

ಜಮೀನಿನಲ್ಲಿ ಬೀಡು ಬಿಟ್ಟಿದ್ದ ಕುರಿಗಾಹಿಗಳ ಎದುರೇ ಚಿರತೆಯೊಂದು ಮೇಕೆ ಹೊತ್ತೊಯ್ದಿದೆ. ಕುರಿಗಾಹಿಗಳು ಜೋರಾಗಿ ಕೂಗಿದ್ದರಿಂದ ಚಿರತೆ ಮೆಕ್ಕೆಜೋಳದ ಹೊಲದಲ್ಲಿ ಪರಾರಿಯಾಗಿದೆ. ಸ್ಥಳಕ್ಕೆ ಚನ್ನಗಿರಿ ಮಾವಿನಕೋಟೆ ವಲಯ ಅರಣ್ಯ ಇಲಾಖೆ ಗಸ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು‌. ಚರಿತೆ ಸೆರೆಗೆ ಬೋನು ಇಡಲಾಗುವುದು ಎಂದು ತಿಳಿಸಿದ್ದಾರೆ.

ಸಾಸ್ವೆಹಳ್ಳಿ ಸುತ್ತಮುತ್ತಲೂ ಗುಡ್ಡಗಳು ಇರುವುದರಿಂದ ಕಾಡು ಪ್ರಾಣಿಗಳು ಹೆಚ್ಚಾಗಿವೆ. ಆಹಾರ ಹುಡುಕಿಕೊಂಡು ಅವು ಓಡಾಡುವುದರಿಂದ ರೈತರು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

To Top