ದಾವಣಗೆರೆ; ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಮಧ್ಯಾಹ್ನ 3.30 ಕ್ಕೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳನ್ನು ಆಯ್ಕೆ ಸಮಿತಿ ಸಭೆ ನಡೆಯಲಿದೆ.
ಆಸಕ್ತರು ಕಡ್ಡಾಯವಾಗಿ ಸಾಲ, ಸೌಲಭ್ಯ ಕೋರಿ ಆನ್ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯೊಂದಿಗೆ ಹಾಗೂ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.



