ದಾವಣಗೆರೆ: ಹಿರಿಯರಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸ್ವಾಮೀಜಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದು, ಮಠಗಳು ಮತ್ತು ಮಠಾಧೀಶರಿಗೆ ಅವಮಾನ ಮಾಡಿದಂತೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಸ್ವಾಭಿಮಾನಿ ಬಳಗದ ಉದ್ಘಾಟನಾ ಸಮಾರಂಭದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗಬೇಕೆಂಬ ಸೈದ್ಧಾಂತಿಕ ಅಭಿಪ್ರಾಯ
ವ್ಯಕ್ತಪಡಿಸಿದ್ದ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಅವರ ಬಗ್ಗೆ ಶಾಮನೂರು ಶಿವಶಂಕರಪ್ಪ ಅವರು ಏಕವಚನ
ಪದ ಪ್ರಯೋಗ ಮಾಡಿದ್ದು ಸರಿಯಲ್ಲ. ಇದರಿಂದ
ಲಕ್ಷಾಂತರ ಭಕ್ತರಿಗೆ ಘಾಸಿಯುಂಟು ಮಾಡಿದೆ.
ಪ್ರಜಾಪ್ರಭುತ್ವ ಉಳಿಯಬೇಕಾದರೆ, ಅಸಮಾನತೆ ಹೋಗಲು, ಎಲ್ಲರಿಗೂ ಅಧಿಕಾರ ಸಿಗುವಂತಾಗಲು ಕುಟುಂಬ ರಾಜಕಾರಣ ಅಂತ್ಯವಾಗಬೇಕೆಂಬ ಸೈದ್ಧಾಂತಿಕ ನಿಲುವು ವ್ಯಕ್ತಪಡಿಸಿದ್ದರು. ಅವರನ್ನು ಟಾರ್ಗೆಟ್ ಮಾಡಿ ಕಾರ್ಯಕ್ರಮವೊಂದರಲ್ಲಿ ಶಾಮನೂರು ಶಿವಶಂಕರಪ್ಪ ಅವರು ಏಕ. ವಚನದಲ್ಲಿ ಮಾತನಾಡಿದ್ದು ದುರದೃಷ್ಟಕರ. ರಾಜಕಾರಣಕ್ಕಾಗಿ ಈ ರೀತಿ ಮಾತನಾಡಿದ್ದಾರೆ. ಸ್ಚಾಮೀಜಿಗಳಿಗೆ ಖಾವಿ ಬಿಡಿ, ರಾಜಕಾರಣ ಬನ್ನಿ ಎಂದೆಲ್ಲಾ ಮಾಡಿರುವುದು ಅವರಿಗೆ ಮಾಡಿದ ಅವಮಾನ ಎಂದಿದ್ದಾರೆ.



