Connect with us

Dvgsuddi Kannada | online news portal | Kannada news online

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಸ್ವಾಮೀಜಿ‌ಗಳಿಗೆ ಏಕವಚನದಲ್ಲಿ ನಿಂದನೆ; ಮಠಗಳು, ಮಠಾಧೀಶರಿಗೆ ಮಾಡಿದ ಅವಮಾನ; ವಿನಯ್

vinaykumar shamanur shivashakarappa

ದಾವಣಗೆರೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಸ್ವಾಮೀಜಿ‌ಗಳಿಗೆ ಏಕವಚನದಲ್ಲಿ ನಿಂದನೆ; ಮಠಗಳು, ಮಠಾಧೀಶರಿಗೆ ಮಾಡಿದ ಅವಮಾನ; ವಿನಯ್

ದಾವಣಗೆರೆ: ಹಿರಿಯರಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸ್ವಾಮೀಜಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದು, ಮಠಗಳು ಮತ್ತು ಮಠಾಧೀಶರಿಗೆ ಅವಮಾನ ಮಾಡಿದಂತೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಸ್ವಾಭಿಮಾನಿ ಬಳಗದ ಉದ್ಘಾಟನಾ ಸಮಾರಂಭದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗಬೇಕೆಂಬ ಸೈದ್ಧಾಂತಿಕ ಅಭಿಪ್ರಾಯ
ವ್ಯಕ್ತಪಡಿಸಿದ್ದ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಅವರ ಬಗ್ಗೆ ಶಾಮನೂರು ಶಿವಶಂಕರಪ್ಪ ಅವರು ಏಕವಚನ
ಪದ ಪ್ರಯೋಗ ಮಾಡಿದ್ದು ಸರಿಯಲ್ಲ. ಇದರಿಂದ
ಲಕ್ಷಾಂತರ ಭಕ್ತರಿಗೆ ಘಾಸಿಯುಂಟು ಮಾಡಿದೆ.

ಪ್ರಜಾಪ್ರಭುತ್ವ ಉಳಿಯಬೇಕಾದರೆ, ಅಸಮಾನತೆ ಹೋಗಲು, ಎಲ್ಲರಿಗೂ ಅಧಿಕಾರ ಸಿಗುವಂತಾಗಲು ಕುಟುಂಬ ರಾಜಕಾರಣ ಅಂತ್ಯವಾಗಬೇಕೆಂಬ ಸೈದ್ಧಾಂತಿಕ ನಿಲುವು ವ್ಯಕ್ತಪಡಿಸಿದ್ದರು. ಅವರನ್ನು ಟಾರ್ಗೆಟ್ ಮಾಡಿ ಕಾರ್ಯಕ್ರಮವೊಂದರಲ್ಲಿ ಶಾಮನೂರು ಶಿವಶಂಕರಪ್ಪ ಅವರು ಏಕ. ವಚನದಲ್ಲಿ ಮಾತನಾಡಿದ್ದು ದುರದೃಷ್ಟಕರ. ರಾಜಕಾರಣಕ್ಕಾಗಿ ಈ ರೀತಿ ಮಾತನಾಡಿದ್ದಾರೆ. ಸ್ಚಾಮೀಜಿಗಳಿಗೆ ಖಾವಿ ಬಿಡಿ, ರಾಜಕಾರಣ ಬನ್ನಿ ಎಂದೆಲ್ಲಾ ಮಾಡಿರುವುದು ಅವರಿಗೆ ಮಾಡಿದ ಅವಮಾನ ಎಂದಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top