Connect with us

Dvgsuddi Kannada | online news portal | Kannada news online

ಪಿಜೆ ಬಡಾವಣೆಯಲ್ಲಿ ಯಾವುದೇ ಆಸ್ತಿ ವಕ್ಫ್ ಹೆಸರಿನಲ್ಲಿಲ್ಲ; ಪಹಣಿಯಲ್ಲಿ ಸರ್ಕಾರಿ ಖರಾಬು ಎಂದು ನಮೂದು; ದೂಡಾ ಅಧ್ಯಕ್ಷ

pj badavane davangere

ದಾವಣಗೆರೆ

ಪಿಜೆ ಬಡಾವಣೆಯಲ್ಲಿ ಯಾವುದೇ ಆಸ್ತಿ ವಕ್ಫ್ ಹೆಸರಿನಲ್ಲಿಲ್ಲ; ಪಹಣಿಯಲ್ಲಿ ಸರ್ಕಾರಿ ಖರಾಬು ಎಂದು ನಮೂದು; ದೂಡಾ ಅಧ್ಯಕ್ಷ

ದಾವಣಗೆರೆ: ಪಿಜೆ ಬಡಾವಣೆ ನಿವಾಸಿಗಳು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ. ಬಡಾವಣೆಯಲ್ಲಿ 4.13 ಎಕರೆಯ ಯಾವುದೇ ಆಸ್ತಿ ವಕ್ಫ್ ಹೆಸರಿನಲ್ಲಿಲ್ಲ. ಚಾಲ್ತಿ ಪಹಣಿಯಲ್ಲಿ ವಕ್ಫ್ ಬದಲು ಸರ್ಕಾರಿ ಖರಾಬು ಎಂಬುದಾಗಿ ಪಹಣಿಯಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದು ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ತಿಳಿಸಿದ್ದಾರೆ.

ನಗರದ ಪಿಜೆ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಮೇಳ ಉದ್ಘಾಟಿಸಿ ಮಾತನಾಡಿ, ಪಿಜೆ ಬಡಾವಣೆಯ 4.13 ಎಕರೆ ವಕ್ಫ್‌ಗೆ ಸೇರಿದೆ ಎಂದು ಸುದ್ದಿ ಹರಡಿತ್ತು. ಇದೇ ವಿಚಾರವಾಗಿ ನಾವು ಸಭೆ ಮಾಡಿ, ಸ್ಪಷ್ಟನೆ ನೀಡಿದ್ದೆವು. ಇದೀಗ ಸರ್ಕಾರಿ ದಾಖಲೆಗಳಲ್ಲೇ ಅದು ಯಾರದ್ದೇ ಸ್ವತ್ತು ಅಲ್ಲ. ಜನರ ಆಸ್ತಿ ಎಂದು ನಮೂದಾಗಿದೆ. ಈ ಬಗ್ಗೆ ಸರ್ಕಾರಿ ದಾಖಲೆಗಳನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದೇನೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರ ಕಾಳಜಿಯಿಂದಾಗಿ ಸರ್ವೇ ನಂಬರ್ ಸಹ ಬದಲಾಗಿದೆ.ಪಿಜೆ ಬಡಾವಣೆಯ 4.13 ಎಕರೆ ವಕ್ಫ್‌ಗೆ ಸೇರಿಲ್ಲ. ಹಿಂದೆ ದಾಖಲೆಗಳಲ್ಲಿ ಇದ್ದಂತಹ ಸರ್ವೇ ನಂಬರ್ ಸಹ ಬದಲಾಗಿದ್ದು, ಚಾಲ್ತಿ ಪಹಣಿಯಲ್ಲಿ ಸರ್ಕಾರಿ ಖರಾಬು ಎಂಬುದಾಗಿ ತಿದ್ದುಪಡಿಯಾಗಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top