ದಾವಣಗೆರೆ: ದಾವಣಗೆರೆ ನಗರದ ಡಿಸಿಎಂ ಬಡಾವಣೆ ಬಸ್ ನಿಲ್ದಾಣದ ಎದುರು ಇರುವ ಡಿವಿಎಸ್ ಪದವಿ ಪೂರ್ವ ಕಾಲೇಜು ಮತ್ತು ಸಮರ್ಥ ಮೆಡಿಕಲ್ ಅಕಾಡೆಮಿ ಇಲಾಖೆಯಿಂದ ಯಾವುದೇ ಮಾನ್ಯತೆ ನೀಡಿರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕರಿಸಿದ್ದಪ್ಪ ತಿಳಿಸಿದ್ದಾರೆ.
ಈ ಸಂಸ್ಥೆಗೆ ಇಲಾಖೆಯಿಂದ ಮಾನ್ಯತೆ ನೀಡದಿದ್ದರೂ ಸಹ ಪಿಯುಸಿಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಶೈಕ್ಷಣಿಕ ಚಟುವಟಿಕೆ ನಡೆಸುತ್ತಿರುವುದು ಕಂಡು ಬಂದಿರುತ್ತದೆ. ಈ ಸಂಸ್ಥೆಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲು ಮಾಡಬಾರದೆಂದು ತಿಳಿಸಿದ್ದಾರೆ. ಈಗಾಗಲೇ ಸಂಸ್ಥೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.