ದಾವಣಗೆರೆ: ಈ ಕಾಲೇಜು, ಅಕಾಡೆಮಿಗೆ ಮಾನ್ಯತೆ ಇಲ್ಲ; ಪೋಷಕರು ಮಕ್ಕಳನ್ನು ಸೇರಿಸದಂತೆ ಉಪನಿರ್ದೇಶಕ ಕರಿಸಿದ್ದಪ್ಪ ಸೂಚನೆ

ದಾವಣಗೆರೆ: ದಾವಣಗೆರೆ ನಗರದ ಡಿಸಿಎಂ ಬಡಾವಣೆ ಬಸ್‍ ನಿಲ್ದಾಣದ ಎದುರು ಇರುವ ಡಿವಿಎಸ್ ಪದವಿ ಪೂರ್ವ ಕಾಲೇಜು ಮತ್ತು ಸಮರ್ಥ ಮೆಡಿಕಲ್ ಅಕಾಡೆಮಿ ಇಲಾಖೆಯಿಂದ ಯಾವುದೇ ಮಾನ್ಯತೆ ನೀಡಿರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕರಿಸಿದ್ದಪ್ಪ ತಿಳಿಸಿದ್ದಾರೆ.

ಈ ಸಂಸ್ಥೆಗೆ ಇಲಾಖೆಯಿಂದ ಮಾನ್ಯತೆ ನೀಡದಿದ್ದರೂ ಸಹ ಪಿಯುಸಿಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಶೈಕ್ಷಣಿಕ ಚಟುವಟಿಕೆ ನಡೆಸುತ್ತಿರುವುದು ಕಂಡು ಬಂದಿರುತ್ತದೆ. ಈ ಸಂಸ್ಥೆಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲು ಮಾಡಬಾರದೆಂದು ತಿಳಿಸಿದ್ದಾರೆ. ಈಗಾಗಲೇ ಸಂಸ್ಥೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Related Post
Recent Posts