ದಾವಣಗೆರೆ: ಶಿವರಾತ್ರಿ ಹಬ್ಬ; ಖ್ಯಾತ ಗಾಯಕಿ ಅರ್ಚನಾ ಉಡುಪ ಸಂಗೀತ ಕಾರ್ಯಕ್ರಮ

ದಾವಣಗೆರೆ; ಮಹಾಶಿವರಾತ್ರಿ ಹಬ್ಬ ಹಿನ್ನೆಲೆ ಫೆ. 26ರಂದು ಸಂಜೆಯಿಂದ ನಗರದ ವಿವೇಕಾನಂದ ಬಡಾವಣೆಯಲ್ಲಿರುವ ಶಿವ ಧ್ಯಾನ ಮಂದಿರದಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಅರ್ಚನಾ ಉಡುಪ ಅವರಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಸಚಿವ ಎಸ್ ಎಸ್ ಮಲ್ಲಿಕಾರ್ಜುನರವರು ಹಾಗೂ ಸಂಸದೆ ಡಾ ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯ ಜನತೆಗೆ ಭಕ್ತಿ-ಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ನಾಳೆ (ಫೆ.26)ಬುಧವಾರ ಸಂಜೆ 7.30 ಗಂಟೆಗೆ ಶಿವಧ್ಯಾನ ಮಂದಿರ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಶಿವಾಧ್ಯಾನ ಮಂದಿರದ ಭಕ್ತವೃಂದ, ಬಾಪೂಜಿ ವಿದ್ಯಾಸಂಸ್ಥೆ – ಬಿಐಇಟಿ ಕಾಲೇಜು , ಸ್ವಾಮಿ ವಿವೇಕಾನಂದ ಬಡಾವಣೆ ನಾಗರೀಕರ ಪರವಾಗಿ ಆತ್ಮೀಯ ಸ್ವಾಗತಕೋರಲಾಗಿದೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Related Post
Recent Posts