Connect with us

Dvgsuddi Kannada | online news portal | Kannada news online

ದಾವಣಗೆರೆ: 55 ಲಕ್ಷ ವೆಚ್ಚದ ಜಿಲ್ಲಾ ಲಸಿಕಾ ಸಂಗ್ರಹಣಾ ಘಟಕಕ್ಕೆ ಶಂಕುಸ್ಥಾಪನೆ

davangere vacations

ದಾವಣಗೆರೆ

ದಾವಣಗೆರೆ: 55 ಲಕ್ಷ ವೆಚ್ಚದ ಜಿಲ್ಲಾ ಲಸಿಕಾ ಸಂಗ್ರಹಣಾ ಘಟಕಕ್ಕೆ ಶಂಕುಸ್ಥಾಪನೆ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಾವಣಗೆರೆ ಇವರ ಆಶ್ರಯದಲ್ಲಿ ಡಿಹೆಚ್‌ಓ ಕಚೇರಿ ಸಮೀಪ ನಿರ್ಮಿಸಲಾಗುತ್ತಿರುವ ಜಿಲ್ಲಾ ಲಸಿಕಾ ಸಂಗ್ರಹಣಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ದಾವಣಗೆರೆ: ಇಂದಿನಿಂದ ನಾಲ್ಕು ದಿನ ಉದ್ಯೋಗಾಧಾರಿತ ಉಚಿತ ತರಬೇತಿ ಶಿಬಿರಕ್ಕೆ ಆಯ್ಕೆ

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ನಿರ್ಮಿಸಲು ಉದ್ಧೇಶಿಸಲಾಗಿರುವ ಜಿಲ್ಲಾ ಲಸಿಕಾ ಸಂಗ್ರಹಣ ಘಟಕ ವೈಜ್ಞಾನಿಕವಾಗಿರಬೇಕು, ಇದರಲ್ಲಿ ಯಾವ ಲೋಪದೋಷಗಳು ಬಾರದಂತೆ ಅಧಿಕಾರಿಗಳು ಗಮನ ಹರಿಸಬೇಕೆಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು.

ಉತ್ತರ ಪ್ರದೇಶದಿಂದ ಬ್ಯಾಂಕ್ ದರೋಡೆಗೆ ಬಂದಿದ್ದರನ್ನು ಸಿನಿಮಾ ಸ್ಟೈಲ್ ನಲ್ಲಿ ಚೇಜ್ ಮಾಡಿ ಗುಂಡು ಹಾರಿಸಿ ಸೆರೆಹಿಡಿದ ದಾವಣಗೆರೆ ಪೊಲೀಸರು…!!

ಲಸಿಕೆಗಳ ಸಂಗ್ರಹಣೆಗಾಗಿ ನಿರ್ದಿಷ್ಟವಾಗಿ ವಿನ್ಯಾಸಗೊಳಿಸಬೇಕು.ಈ ಹಿನ್ನಲೆಯಲ್ಲಿ ಕಟ್ಟಡ ಸಂಪೂರ್ಣ ನಿರ್ಮಾಣ ಆಗುವವರೆಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಟ್ಟಡದ ಗುಣ ಮಟ್ಟ ಮಾತ್ರವಲ್ಲದೇ ಇದಕ್ಕೆ ಬಳಸಲಾಗುವ ಎಲ್ಲಾ ಸಾಮಾಗ್ರಿಗಳು ಮತ್ತು ಪರಿಕರಗಳ ಗುಣಮಟ್ಟ ಪರಿಶಿಲನೆ ನಡೆಸುವಂತೆ ಡಿಹೆಚ್‌ಓಗೆ ಸೂಚನೆ ನಿಡಿದರು.

ಕೇಂದ್ರದ ವಿವರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಆರೋಗ್ಯ ಯೋಜನೆಗಳಿಗೆ ಬೇಕಾದ ಯಾವುದೇ ಲಸಿಕೆಗಳನ್ನು ಈವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಾತ್ಕಾಲಿಕವಾಗಿ ಸಂಗ್ರಹ ಮಾಡಲಾಗುತ್ತಿತ್ತು. ಆದರೆ, ಶಾಶ್ವತ ಘಟಕ ನಿರ್ಮಿಸುವ ನಿಟ್ಟಿನಲ್ಲಿ ಇದೀಗ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಪ್ರತ್ಯೇಕವಾಗಿ ಲಸಿಕಾ ಸಂಗ್ರಹಣಾ ಘಟಕವನ್ನು ನಿರ್ಮಿಸಲು ಸರ್ಕಾರದಿಂದಲೇ ಟೆಂಡರು ಕರೆದು ನಿರ್ಮಿಸಲಾಗುತ್ತಿದೆ. ಈ ಘಟಕಕ್ಕೆ ಎನ್‌ಹೆಚ್‌ಎಂನಿಂದ ರೂ.55 ಲಕ್ಷ ಅನುದಾನ ಬಂದಿದೆ.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಷಣ್ಮುಖಪ್ಪ, ಆರ್‌ಸಿಹೆಚ್‌ಓ ಡಾ.ಎ.ಎಂ.ರೇಣುಕಾರಾಧ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಡಿ.ಜಿ.ರಾಘವನ್, ಡಿಎಲ್‌ಓ ಡಾ.ಮಂಜುನಾಥ್ ಪಾಟೀಲ್, ಎಫ್‌ಡಬ್ಲುಓ ಡಾ.ರುದ್ರಸ್ವಾಮಿ, ಡಿಎಂಓ ಡಾ.ಗಂಗಾಧರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top