ದಾವಣಗೆರೆ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌದರಿ ಅವರು ಏಪ್ರಿಲ್ 15, 16 ಮತ್ತು 17 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳುವರು.ಏಪ್ರಿಲ್ 14 ರಂದು ರಾತ್ರಿ 8.30 ಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಏಪ್ರಿಲ್ 15 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದ ಬಳಿ ಬ್ರಾಹ್ಮಣ ಹಾಸ್ಟೆಲ್ ಮುಂಭಾಗದಲ್ಲಿ ದಲಿತ ಸಂರಕ್ಷಣಾ ಸಮಿತಿಯಿಂದ ಹಮ್ಮಿಕೊಂಡಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಲ್ಲಿ ಭಾಗವಹಿಸುವರು. ಮ.1.30 ಕ್ಕೆ ಆವರಗೊಳ್ಳ ಗ್ರಾಮ ವ್ಯಾಪ್ತಿಯ ಕೇಂದ್ರೀಯ ವಿದ್ಯಾಲಯ ಹಿಂಭಾಗದಲ್ಲಿ ವಾಸಿಸುತ್ತಿರುವ ಕುಟುಂಬಗಳ ಸ್ಥಳಕ್ಕೆ ಭೇಟಿ ನೀಡುವರು. ನಂತರ ಸಂಜೆ 5 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಮಾಡುವರು.
ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಶೇ 11ರಷ್ಟು ಫಲಿತಾಂಶ ಕುಸಿತ
ಏಪ್ರಿಲ್ 16 ರಂದು ಬೆಳಿಗ್ಗೆ 10.30ಕ್ಕೆ ಜಗಳೂರು ತಾಲ್ಲೂಕು ಆಸ್ಪತ್ರೆ ಹಾಗೂ ತಾಲ್ಲೂಕು ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಜಗಳೂರು ತಾಲ್ಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡುವರು ನಂತರ ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ಬಾಲಕಿಯರ ಮೆಟ್ರಿಕ್ ನಂತರ ಹಾಸ್ಟೆಲ್ಗೆ ಭೇಟಿ ನೀಡಿ ವಾಸ್ತವ್ಯ ಮಾಡುವರು.
ದಾವಣಗೆರೆ: ಈ ಏರಿಯಾದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ
ಏಪ್ರಿಲ್ 17 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಭೇಟಿ, ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಮ. 2 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಮ.3 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು.



