Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾರ್ಮಿಕರ ಕಾಯಂಗೆ 5 ಲಕ್ಷ ವರೆಗೆ ಲಂಚಕ್ಕೆ ಬೇಡಿಕೆ; ಕಾಂಗ್ರೆಸ್ ಶಾಸಕ ಅಸಮಾಧಾನ

mla basavanthappa

ರಾಜ್ಯ ಸುದ್ದಿ

ದಾವಣಗೆರೆ: ಕಾರ್ಮಿಕರ ಕಾಯಂಗೆ 5 ಲಕ್ಷ ವರೆಗೆ ಲಂಚಕ್ಕೆ ಬೇಡಿಕೆ; ಕಾಂಗ್ರೆಸ್ ಶಾಸಕ ಅಸಮಾಧಾನ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಗೂಲಿ ಪೌರ ಕಾರ್ಮಿಕರ ಸೇವೆ ಕಾಯಂ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.ಆದರೆ, ಅಧಿಕಾರಿಗಳು ಕಾರ್ಮಿಕರಿಂದ 5 ಲಕ್ಷ ವರೆಗೆ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೆ.ಎಸ್‌. ಬಸವಂತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ; 57 ಸಾವಿರ ಸನಿಹ; ಏ‌.14ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?

ಮಹಾನಗರ ಪಾಲಿಕೆಯ ಆವರಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಢಿದರು. ಲಂಚ ಪಡೆಯುವ ವ್ಯವಸ್ಥೆ ದಾವಣಗೆರೆಗೆ ಮಾತ್ರ ಸೀಮಿತವಾಗಿಲ್ಲ. ಇದು ರಾಜ್ಯದ ಎಲ್ಲೆಡೆ ನಡೆಯುತ್ತಿದೆ. ಪೌರಕಾರ್ಮಿಕರ ನೋಡಿದ್ರೆ ಕಣ್ಣೀರು ಬರುತ್ತದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ ಆಧಾರದ ಮೇರೆಗೆ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಿ ಮೇ 1ಕ್ಕೆ ಆದೇಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ವಿಚಾರ ಒಂದು ಕಡೆ ಖುಷಿಯಾದ್ರೆ, ಮತ್ತೊಂದು ಕಡೆ ದುಃಖದ ವಿಚಾರವಾಗಿದೆ. ಏಕೆಂದ್ರೆ, ಪೌರ ಕಾರ್ಮಿಕರಿಂದ ಲಂಚ ಪಡೆದು ಕಾಯಂಗೊಳಿಸುವ ಕೆಲಸ ನಡೆಯುತ್ತಿದೆ. ಈ ಲಂಚದ ಹಿಂದೆ ಅಧಿಕಾರಿಗಳ ಇದ್ದರೂ ಅಥವಾ ಬೇರೆ ಒತ್ತಡ ಇದೆಯೋ ಗೊತ್ತಿಲ್ಲ. ಹೀಗಾಗಿ ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸುವ ಅಗತ್ಯ ಎಂದರು.

ಪೌರ ಕಾರ್ಮಿಕರು ಶೇ 10ರ ಬಡ್ಡಿದರದಲ್ಲಿ ಸಾಲ ಪಡೆಯುತ್ತಿದ್ದಾರೆ. ಮಹಿಳಾ ಪೌರಕಾರ್ಮಿಕರ ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಗಮನಹರಿಸಿ, ಲಂಚಕ್ಕೆ ಬೇಡಿಕೆ ಇಡುವ ಅಧಿಕಾರಿಗಳು ಮತ್ತು ಸಂಘಟನೆಗಳ ಮುಖಂಡರನ್ನು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top