Connect with us

Dvgsuddi Kannada | online news portal | Kannada news online

ದಾವಣಗೆರೆ: ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನ

kalubhayi roga

ಆರೋಗ್ಯ

ದಾವಣಗೆರೆ: ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ದಾವಣಗೆರೆ: ಜಿಲ್ಲೆಯಾದ್ಯಂತ ಇದೇ ಏಪ್ರಿಲ್ 26ರಿಂದ ಜೂನ್ 9 ರವರೆಗೆ ಜಾನುವಾರುಗಳಿಗೆ ಉಚಿತ ಲಸಿಕಾ ಅಭಿಯಾನ ನಡೆಯಲಿದ್ದು, ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಸುರೇಶ್ ಬಿ. ಇಟ್ನಾಳ್ ತಿಳಿಸಿದರು.

ದಾವಣಗೆರೆ: ಅಡಿಕೆಗೆ ಭರ್ಜರಿ ಬೆಲೆ; 60 ಸಾವಿರ ಗಡಿ ದಾಟಿದ ದರ- ಏ‌.21ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಾರೆ. ಆದ್ದರಿಂದ ಶೇ.100 ರಷ್ಟು ಲಸಿಕೆ ನೀಡುವ ಮೂಲಕ ರೋಗವನ್ನು ಸಂಪೂರ್ಣ ನಿಯಂತ್ರಿಸಿ, ನಿರ್ಮೂಲನೆ ಮಾಡಬೇಕು ಎಂದರು.

ಮಾನವನಿಗೆ ಮಾತು ಬರುವುದರಿಂದ ಸಮಸ್ಯೆಗಳನ್ನು ಹೇಳಿಕೊಂಡು ವೈದ್ಯನ ಬಳಿ ತೆರಳುತ್ತಾನೆ, ಆದರೆ ಮಾತು ಬಾರದ ಮೂಕ ಜೀವಿ ಜಾನುವಾರುಗಳ ಗತಿ ಏನು?. ಆದ್ದರಿಂದ ಸೂಕ್ಷ್ಮವಾಗಿ ಗಮನಿಸಿ ಲೋಪವಾಗದಂತೆ ಪ್ರತಿ ಜಾನುವಾರುಗಳಿಗೆ ಲಸಿಕೆ ನೀಡಬೇಕು ಎಂದ ಅವರು, ಪಶುವೈದ್ಯಕೀಯ ಇಲಾಖೆ ಸಹಾಯವಾಣಿ 1962 ಸಂಖ್ಯೆಯನ್ನು ಪ್ರತಿ ಪಶುವೈದ್ಯಕೀಯ ಇಲಾಖೆಯಲ್ಲಿ ಭಿತ್ತರಿಸಬೇಕು. ಹಾಗೆಯೇ ಇಲಾಖೆ ವತಿಯಿಂದ ಮತ್ತಷ್ಟು ಪರಿಣಾಮಕಾರಿಯಾಗಿ ರೈತರಿಗೆ ತಲುಪುವಂತೆ ಪ್ರಚಾರಪಡಿಸಿ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ನೋಡಿಕೊಳ್ಳಬೇಕೆಂದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಹೆಚ್.ಎಂ.ಮಹೇಶ್ ಮಾತನಾಡಿ, ಜಿಲ್ಲೆಯಲ್ಲಿ 2,37,801 ದನ, 91,896 ಎಮ್ಮೆ ಸೇರಿ ಒಟ್ಟು 3,29,697 ಜಾನುವಾರುಗಳಿದ್ದು, 3,13,100 ಲಸಿಕೆ ಲಭ್ಯವಿದೆ. ಜಿಲ್ಲಾದ್ಯದಂತ 3000 ಬ್ಲಾಕ್‍ಗಳನ್ನು ಗುರುತಿಸಿದ್ದು, 321 ಲಸಿಕಾದಾರರು ಪ್ರತಿ ಗ್ರಾಮ ಹಾಗೂ ಮೆನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ನೀಡಲಿದ್ದಾರೆ ಎಂದರು.

ಕೋಳಿ ವಿತರಣೆಗೆ ಅರ್ಹ ಮಹಿಳೆಯರ ಆಯ್ಕೆ;
ಮಹಿಳೆಯರನ್ನು ಆರ್ಥಿಕವಾಗಿ ಸಬಲರಾಗಿಸಲು ಇಲಾಖೆ ವತಿಯಿಂದ ಅರ್ಹ ಪ.ಜಾತಿ, ಪ.ಪಂಗಡ ಹಾಗೂ ಸಾಮಾನ್ಯ ಮಹಿಳೆಯರಿಗೆ ಉಚಿತವಾಗಿ ಕೋಳಿ ಮರಿ ನೀಡಲಾಗುವುದು. ಜಿಲ್ಲೆಯಾದ್ಯಂತ 168 ಪರಿಶಿಷ್ಟ ಜಾತಿ ಮಹಿಳೆಯರಿಂದ ಅರ್ಜಿಗಳು ಸ್ವೀಕೃತವಾಗಿದ್ದು, ಅದರಲ್ಲಿ 45 ಆಯ್ಕೆ ಗುರಿ ನೀಡಲಾಗಿದೆ. ಪರಿಶಿಷ್ಟ ಪಂಗಡ ಮಹಿಳೆಯರಿಂದ 659 ಅರ್ಜಿ ಸ್ವಕೃತವಾಗಿದ್ದು, 645 ಹಾಗೂ 737 ಸಾಮಾನ್ಯ ಮಹಿಳೆಯರಿಂದ ಅರ್ಜಿ ಸ್ವೀಕೃತವಾಗಿದ್ದು, 238 ಆಯ್ಕೆ ಮಾಡಿಕೊಳ್ಳಲು ಗುರಿ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 1065 ಅರ್ಜಿಗಳು ಸ್ವೀಕೃತವಾಗಿದ್ದು, ಇಲಾಖೆ ವತಿಯಿಂದ 737 ಆಯ್ಕೆಗೆ ಭೌತಿಕ ಗುರಿ ನೀಡಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ “ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ” ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಪಶುವೈದ್ಯಾಧಿಕಾರಿಗಳು, ಕರ್ನಾಟಕ ಕುಕ್ಕುಟ ಮಾಹಮಂಡಳಿ ಪ್ರಾದೇಶಿಕ ನಿರ್ದೇಶಕರು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಆರೋಗ್ಯ

To Top